ಈ ಕುರಿತು ಅರ್ಜಿದಾರರು ಲೋಕಾಯುಕ್ತ ಪೊಲೀಸ್ ವಿಭಾಗದ ಬೆಂಗಳೂರು ನಗರ ಘಟಕ–1ಕ್ಕೆ ದೂರು ಸಲ್ಲಿಸಿದ್ದರು. ಆರೋಪಿಯ ಸೂಚನೆಯಂತೆ ಚಂದನ್ ಕುಮಾರ್ ಅವರು ಸೋಮವಾರ ಸಹಾಯಕ ಎಂಜಿನಿಯರ್ ಅವರನ್ನು ಭೇಟಿಮಾಡಿ ₹ 3.80 ಲಕ್ಷ ಲಂಚದ ಹಣ ತಲುಪಿಸಿದರು. ತಕ್ಷಣ ದಾಳಿಮಾಡಿದ ಲೋಕಾಯುಕ್ತ ಪೊಲೀಸ್ ವಿಭಾಗದ ಡಿವೈಎಸ್ಪಿ ಗಿರೀಶ್ ರೋಡ್ಕರ್ ಮತ್ತು ತಂಡ ಆರೋಪಿಯನ್ನು ಬಂಧಿಸಿದೆ ಎಂದು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.