<p><strong>ಬೆಂಗಳೂರು:</strong> ಕಟ್ಟಡವೊಂದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ₹ 3.80 ಲಕ್ಷ ಲಂಚ ಪಡೆದ ಬೆಸ್ಕಾಂನ ಕಗ್ಗಲಿಪುರ ಉಪ ವಿಭಾಗದ ಅಗರ ಕಾರ್ಯಾಚರಣೆ ಮತ್ತು ನಿರ್ವಹಣಾ ವಿಭಾಗದ ಸಹಾಯಕ ಎಂಜಿನಿಯರ್ ಯತೀಶ್ ಪಾಳೇಗಾರ್ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ.</p>.<p>ಚಂದನ್ ಕುಮಾರ್ ಎಸ್. ಎಂಬುವವರು ಕಟ್ಟಡವೊಂದಕ್ಕೆ ವಿದ್ಯುತ್ ಸಂಪರ್ಕ ಕೋರಿ ಅರ್ಜಿ ಸಲ್ಲಿಸಿದ್ದರು. ವಿದ್ಯುತ್ ಸಂಪರ್ಕ ಕಲ್ಪಿಸಲು ₹ 5 ಲಕ್ಷ ಲಂಚ ಕೊಡುವಂತೆ ಸಹಾಯಕ ಎಂಜಿನಿಯರ್ (ಎ.ಇ) ಬೇಡಿಕೆ ಇಟ್ಟಿದ್ದರು. ನಂತರ ಚೌಕಾಸಿ ನಡೆಸಿದಾಗ ₹ 3.80 ಲಕ್ಷ ಲಂಚ ಕೊಟ್ಟರೆ ವಿದ್ಯುತ್ ಸಂಪರ್ಕ ಕಲ್ಪಿಸುವುದಾಗಿ ಹೇಳಿದ್ದರು.</p>.<p>ಈ ಕುರಿತು ಅರ್ಜಿದಾರರು ಲೋಕಾಯುಕ್ತ ಪೊಲೀಸ್ ವಿಭಾಗದ ಬೆಂಗಳೂರು ನಗರ ಘಟಕ–1ಕ್ಕೆ ದೂರು ಸಲ್ಲಿಸಿದ್ದರು. ಆರೋಪಿಯ ಸೂಚನೆಯಂತೆ ಚಂದನ್ ಕುಮಾರ್ ಅವರು ಸೋಮವಾರ ಸಹಾಯಕ ಎಂಜಿನಿಯರ್ ಅವರನ್ನು ಭೇಟಿಮಾಡಿ ₹ 3.80 ಲಕ್ಷ ಲಂಚದ ಹಣ ತಲುಪಿಸಿದರು. ತಕ್ಷಣ ದಾಳಿಮಾಡಿದ ಲೋಕಾಯುಕ್ತ ಪೊಲೀಸ್ ವಿಭಾಗದ ಡಿವೈಎಸ್ಪಿ ಗಿರೀಶ್ ರೋಡ್ಕರ್ ಮತ್ತು ತಂಡ ಆರೋಪಿಯನ್ನು ಬಂಧಿಸಿದೆ ಎಂದು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಲೋಕಾಯುಕ್ತದ ಪೊಲೀಸ್ ವಿಭಾಗದ ಬೆಂಗಳೂರು ನಗರ ಘಟಕ–1ರ ಎಸ್ಪಿ ಶ್ರೀನಾಥ್ ಜೋಶಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಟ್ಟಡವೊಂದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ₹ 3.80 ಲಕ್ಷ ಲಂಚ ಪಡೆದ ಬೆಸ್ಕಾಂನ ಕಗ್ಗಲಿಪುರ ಉಪ ವಿಭಾಗದ ಅಗರ ಕಾರ್ಯಾಚರಣೆ ಮತ್ತು ನಿರ್ವಹಣಾ ವಿಭಾಗದ ಸಹಾಯಕ ಎಂಜಿನಿಯರ್ ಯತೀಶ್ ಪಾಳೇಗಾರ್ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ.</p>.<p>ಚಂದನ್ ಕುಮಾರ್ ಎಸ್. ಎಂಬುವವರು ಕಟ್ಟಡವೊಂದಕ್ಕೆ ವಿದ್ಯುತ್ ಸಂಪರ್ಕ ಕೋರಿ ಅರ್ಜಿ ಸಲ್ಲಿಸಿದ್ದರು. ವಿದ್ಯುತ್ ಸಂಪರ್ಕ ಕಲ್ಪಿಸಲು ₹ 5 ಲಕ್ಷ ಲಂಚ ಕೊಡುವಂತೆ ಸಹಾಯಕ ಎಂಜಿನಿಯರ್ (ಎ.ಇ) ಬೇಡಿಕೆ ಇಟ್ಟಿದ್ದರು. ನಂತರ ಚೌಕಾಸಿ ನಡೆಸಿದಾಗ ₹ 3.80 ಲಕ್ಷ ಲಂಚ ಕೊಟ್ಟರೆ ವಿದ್ಯುತ್ ಸಂಪರ್ಕ ಕಲ್ಪಿಸುವುದಾಗಿ ಹೇಳಿದ್ದರು.</p>.<p>ಈ ಕುರಿತು ಅರ್ಜಿದಾರರು ಲೋಕಾಯುಕ್ತ ಪೊಲೀಸ್ ವಿಭಾಗದ ಬೆಂಗಳೂರು ನಗರ ಘಟಕ–1ಕ್ಕೆ ದೂರು ಸಲ್ಲಿಸಿದ್ದರು. ಆರೋಪಿಯ ಸೂಚನೆಯಂತೆ ಚಂದನ್ ಕುಮಾರ್ ಅವರು ಸೋಮವಾರ ಸಹಾಯಕ ಎಂಜಿನಿಯರ್ ಅವರನ್ನು ಭೇಟಿಮಾಡಿ ₹ 3.80 ಲಕ್ಷ ಲಂಚದ ಹಣ ತಲುಪಿಸಿದರು. ತಕ್ಷಣ ದಾಳಿಮಾಡಿದ ಲೋಕಾಯುಕ್ತ ಪೊಲೀಸ್ ವಿಭಾಗದ ಡಿವೈಎಸ್ಪಿ ಗಿರೀಶ್ ರೋಡ್ಕರ್ ಮತ್ತು ತಂಡ ಆರೋಪಿಯನ್ನು ಬಂಧಿಸಿದೆ ಎಂದು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಲೋಕಾಯುಕ್ತದ ಪೊಲೀಸ್ ವಿಭಾಗದ ಬೆಂಗಳೂರು ನಗರ ಘಟಕ–1ರ ಎಸ್ಪಿ ಶ್ರೀನಾಥ್ ಜೋಶಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>