<p><strong>ಬೆಂಗಳೂರು</strong>: ನಿರ್ಮಾಣ ಕಾಮಗಾರಿಗೆ ನಿರಪೇಕ್ಷಣಾ ಪತ್ರ (ಎನ್ಒಸಿ) ನೀಡಲು ₹5 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಬಿಬಿಎಂಪಿಯ ಹೆಬ್ಬಾಳ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಮಾಧವ ರಾವ್, ಸಹಾಯಕ ಎಂಜಿನಿಯರ್ (ಎಇ) ಸುರೇಂದ್ರ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.</p>.<p>‘ಆರ್ಎಂವಿ ಬಡಾವಣೆಯಲ್ಲಿ ಸಂಜಯ್ ಎಂಬುವವರು ವಾಣಿಜ್ಯ ಸಂಕೀರ್ಣ ನಿರ್ಮಿಸುತ್ತಿದ್ದು, ವಿದ್ಯುತ್ ಕೇಬಲ್ ಅಳವಡಿಕೆಗೆ ಎನ್ಒಸಿ ಪಡೆಯಲು ಬಿಬಿಎಂಪಿಗೆ ಅರ್ಜಿ ಸಲ್ಲಿಸಿದ್ದರು. ಈ ಕೆಲಸ ಮಾಡಿಕೊಡಲು ಎಇಇ ಮತ್ತು ಇಎ ₹10 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲು ₹5 ಲಕ್ಷ ಮತ್ತು ಎನ್ಒಸಿ ನೀಡಿದ ನಂತರ ₹5 ಲಕ್ಷ ನೀಡುವಂತೆ ಸೂಚಿಸಿದ್ದರು’ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>‘ಸಂಜಯ್ ಅವರು ಈ ಸಂಬಂಧ ದೂರು ನೀಡಿದ್ದರು. ಲೋಕಾಯುಕ್ತ ಡಿವೈಎಸ್ಪಿ ಸಿ.ವಸಂತ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ರೂಪಿಸಲಾಗಿತ್ತು. ಅದರಂತೆ ಎಇಇ ಅವರ ಕಚೇರಿಗೆ ತೆರಳಿ ಹಣ ನೀಡುವಂತೆ ಸಂಜಯ್ ಅವರಿಗೆ ಸೂಚಿಸಲಾಗಿತ್ತು’ ಎಂದು ತಿಳಿಸಿದ್ದಾರೆ.</p>.<p>‘ಅದರಂತೆ ಎಇಇ ಕಚೇರಿಗೆ ತೆರಳಿದ ಸಂಜಯ್ ಅವರು ಎಇ ಸುರೇಂದ್ರ ಅವರಿಗೆ ₹5 ಲಕ್ಷ ನೀಡಿದ್ದರು. ಈ ವೇಳೆ ದಾಳಿ ನಡೆಸಿ ಅವರನ್ನು ಬಮಧಿಸಲಾಯಿತು. ಸುರೇಂದ್ರ ಅವರ ಹೇಳಿಕೆ ಆಧರಿಸಿ, ಎಇಇ ಮಾಧವ ರಾವ್ ಅವರನ್ನೂ ಬಂಧಿಸಲಾಯಿತು. ಹಣವನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆದಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಿರ್ಮಾಣ ಕಾಮಗಾರಿಗೆ ನಿರಪೇಕ್ಷಣಾ ಪತ್ರ (ಎನ್ಒಸಿ) ನೀಡಲು ₹5 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಬಿಬಿಎಂಪಿಯ ಹೆಬ್ಬಾಳ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಮಾಧವ ರಾವ್, ಸಹಾಯಕ ಎಂಜಿನಿಯರ್ (ಎಇ) ಸುರೇಂದ್ರ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.</p>.<p>‘ಆರ್ಎಂವಿ ಬಡಾವಣೆಯಲ್ಲಿ ಸಂಜಯ್ ಎಂಬುವವರು ವಾಣಿಜ್ಯ ಸಂಕೀರ್ಣ ನಿರ್ಮಿಸುತ್ತಿದ್ದು, ವಿದ್ಯುತ್ ಕೇಬಲ್ ಅಳವಡಿಕೆಗೆ ಎನ್ಒಸಿ ಪಡೆಯಲು ಬಿಬಿಎಂಪಿಗೆ ಅರ್ಜಿ ಸಲ್ಲಿಸಿದ್ದರು. ಈ ಕೆಲಸ ಮಾಡಿಕೊಡಲು ಎಇಇ ಮತ್ತು ಇಎ ₹10 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲು ₹5 ಲಕ್ಷ ಮತ್ತು ಎನ್ಒಸಿ ನೀಡಿದ ನಂತರ ₹5 ಲಕ್ಷ ನೀಡುವಂತೆ ಸೂಚಿಸಿದ್ದರು’ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>‘ಸಂಜಯ್ ಅವರು ಈ ಸಂಬಂಧ ದೂರು ನೀಡಿದ್ದರು. ಲೋಕಾಯುಕ್ತ ಡಿವೈಎಸ್ಪಿ ಸಿ.ವಸಂತ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ರೂಪಿಸಲಾಗಿತ್ತು. ಅದರಂತೆ ಎಇಇ ಅವರ ಕಚೇರಿಗೆ ತೆರಳಿ ಹಣ ನೀಡುವಂತೆ ಸಂಜಯ್ ಅವರಿಗೆ ಸೂಚಿಸಲಾಗಿತ್ತು’ ಎಂದು ತಿಳಿಸಿದ್ದಾರೆ.</p>.<p>‘ಅದರಂತೆ ಎಇಇ ಕಚೇರಿಗೆ ತೆರಳಿದ ಸಂಜಯ್ ಅವರು ಎಇ ಸುರೇಂದ್ರ ಅವರಿಗೆ ₹5 ಲಕ್ಷ ನೀಡಿದ್ದರು. ಈ ವೇಳೆ ದಾಳಿ ನಡೆಸಿ ಅವರನ್ನು ಬಮಧಿಸಲಾಯಿತು. ಸುರೇಂದ್ರ ಅವರ ಹೇಳಿಕೆ ಆಧರಿಸಿ, ಎಇಇ ಮಾಧವ ರಾವ್ ಅವರನ್ನೂ ಬಂಧಿಸಲಾಯಿತು. ಹಣವನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆದಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>