<p><strong>ನವದೆಹಲಿ</strong>: ಅತ್ಯಾಧುನಿಕ ರಕ್ಷಣಾ ತಂತ್ರಜ್ಞಾನ ಹಾಗೂ ಜಾಗತಿಕ ವಾಯುಯಾನ ಕ್ಷೇತ್ರದ ಸರ್ವಶ್ರೇಷ್ಠತೆಗೆ ಈ ಸಾರಿಯ ಬೆಂಗಳೂರು ‘ಏರೋ ಇಂಡಿಯಾ–2025’ ‘ಏರ್ ಶೋ’ ಸಾಕ್ಷಿಯಾಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.</p><p>ಬೆಂಗಳೂರಿನಲ್ಲಿ ನಾಳೆಯಿಂದ ಐದು ದಿನ ಆಯೋಜನೆಯಾಗಿರುವ 15ನೇ ಬೆಂಗಳೂರು ಏರ್ ಶೋ ನಲ್ಲಿ ಭಾಗವಹಿಸಲು ಅವರು ನವದೆಹಲಿಯಿಂದ ಇಂದು ಪ್ರಯಾಣ ಬೆಳೆಸಿದರು. ಇದಕ್ಕೂ ಮುನ್ನ ಅವರು ಎಕ್ಸ್ನಲ್ಲಿ ಈ ರೀತಿ ಪೋಸ್ಟ್ ಮಾಡಿದ್ದಾರೆ.</p><p>ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಎಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸಚಿವರು, ಎಚ್ಎಎಲ್ ಘಟಕಕ್ಕೆ ಭೇಟಿ ನೀಡಿದರು. ಮುಂದಿನ ಐದು ದಿನ ಅವರು ಬೆಂಗಳೂರಿನಲ್ಲಿದ್ದು ಏರ್ ಶೋದ ಮೇಲ್ವಿಚಾರಣೆ ವಹಿಸಲಿದ್ದಾರೆ.</p><p>ಯಲಹಂಕದ ವಾಯುನೆಲೆಯಲ್ಲಿ ಫೆಬ್ರುವರಿ 10 ರಿಂದ ಫೆಬ್ರುವರಿ 14ರವರೆಗೆ ‘ಏರೋ ಇಂಡಿಯಾ–2025’ ವೈಮಾನಿಕ ಪ್ರದರ್ಶನ ನಡೆಯಲಿದೆ.</p>.ಏರೋ ಇಂಡಿಯಾ ವೈಮಾನಿಕ ಪ್ರದರ್ಶನ: ಸಂಚಾರ ನಿರ್ಬಂಧ.ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ಕಾವೇರಿ ನೀರು: ಜಲಮಂಡಳಿ ಅಧ್ಯಕ್ಷ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅತ್ಯಾಧುನಿಕ ರಕ್ಷಣಾ ತಂತ್ರಜ್ಞಾನ ಹಾಗೂ ಜಾಗತಿಕ ವಾಯುಯಾನ ಕ್ಷೇತ್ರದ ಸರ್ವಶ್ರೇಷ್ಠತೆಗೆ ಈ ಸಾರಿಯ ಬೆಂಗಳೂರು ‘ಏರೋ ಇಂಡಿಯಾ–2025’ ‘ಏರ್ ಶೋ’ ಸಾಕ್ಷಿಯಾಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.</p><p>ಬೆಂಗಳೂರಿನಲ್ಲಿ ನಾಳೆಯಿಂದ ಐದು ದಿನ ಆಯೋಜನೆಯಾಗಿರುವ 15ನೇ ಬೆಂಗಳೂರು ಏರ್ ಶೋ ನಲ್ಲಿ ಭಾಗವಹಿಸಲು ಅವರು ನವದೆಹಲಿಯಿಂದ ಇಂದು ಪ್ರಯಾಣ ಬೆಳೆಸಿದರು. ಇದಕ್ಕೂ ಮುನ್ನ ಅವರು ಎಕ್ಸ್ನಲ್ಲಿ ಈ ರೀತಿ ಪೋಸ್ಟ್ ಮಾಡಿದ್ದಾರೆ.</p><p>ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಎಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸಚಿವರು, ಎಚ್ಎಎಲ್ ಘಟಕಕ್ಕೆ ಭೇಟಿ ನೀಡಿದರು. ಮುಂದಿನ ಐದು ದಿನ ಅವರು ಬೆಂಗಳೂರಿನಲ್ಲಿದ್ದು ಏರ್ ಶೋದ ಮೇಲ್ವಿಚಾರಣೆ ವಹಿಸಲಿದ್ದಾರೆ.</p><p>ಯಲಹಂಕದ ವಾಯುನೆಲೆಯಲ್ಲಿ ಫೆಬ್ರುವರಿ 10 ರಿಂದ ಫೆಬ್ರುವರಿ 14ರವರೆಗೆ ‘ಏರೋ ಇಂಡಿಯಾ–2025’ ವೈಮಾನಿಕ ಪ್ರದರ್ಶನ ನಡೆಯಲಿದೆ.</p>.ಏರೋ ಇಂಡಿಯಾ ವೈಮಾನಿಕ ಪ್ರದರ್ಶನ: ಸಂಚಾರ ನಿರ್ಬಂಧ.ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ಕಾವೇರಿ ನೀರು: ಜಲಮಂಡಳಿ ಅಧ್ಯಕ್ಷ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>