<p><strong>ಬೆಂಗಳೂರು:</strong> ಮುನ್ನೇಕೊಳಾಲು ಬಳಿಯ ರೈಲ್ವೆ ಕೆಳ ಸೇತುವೆ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಲಾರಿ ಚಕ್ರ ಮೈ ಮೇಲೆ ಹರಿದು ಸೆಕ್ಯುರಿಟಿ ಸಿಬ್ಬಂದಿ ಮಹೇಶ್ (24) ಮೃತಪಟ್ಟಿದ್ದಾರೆ.</p>.<p>‘ಜಾರ್ಖಂಡ್ನ ಮಹೇಶ್, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದರು. ಖಾಸಗಿ ಏಜೆನ್ಸಿಯೊಂದರಲ್ಲಿ ಸೆಕ್ಯುರಿಟಿ ಸಿಬ್ಬಂದಿ ಆಗಿ ಕೆಲಸಕ್ಕೆ ಸೇರಿದ್ದರು. ಕಾಮಗಾರಿ ಸ್ಥಳದಲ್ಲಿ ಸಾಮಗ್ರಿಗಳನ್ನು ಕಾಯುವ ಕರ್ತವ್ಯಕ್ಕೆ ಅವರನ್ನು ನಿಯೋಜಿಸಲಾಗಿತ್ತು. ಅದೇ ಸ್ಥಳದಲ್ಲಿ ಮಂಗಳವಾರ ರಾತ್ರಿ ಈ ಅವಘಡ ಸಂಭವಿಸಿದೆ’ ಎಂದು ಎಚ್ಎಎಲ್ ಸಂಚಾರ ಠಾಣೆ ಪೊಲೀಸ್ ಮೂಲಗಳು ಹೇಳಿವೆ.</p>.<p>‘ಮಹೇಶ್ ಹಾಗೂ ಮತ್ತೊಬ್ಬ ಸೆಕ್ಯುರಿಟಿ ಸಿಬ್ಬಂದಿ ಸ್ಥಳದಲ್ಲಿದ್ದರು. ತಡರಾತ್ರಿ 1 ಗಂಟೆ ಸುಮಾರಿಗೆ ನಿದ್ದೆಗೆ ಜಾರಿದ್ದರು. ಅದೇ ಸಂದರ್ಭದಲ್ಲಿ ಟಿಪ್ಪರ್ ಲಾರಿಯೊಂದು ಸ್ಥಳಕ್ಕೆ ಬಂದಿತ್ತು. ಮಲಗಿದ್ದ ಸೆಕ್ಯುರಿಟಿ ಸಿಬ್ಬಂದಿಯನ್ನು ಚಾಲಕ ನೋಡಿರಲಿಲ್ಲ. ಲಾರಿ ಹಿಂದಕ್ಕೆ ಚಲಿಸಲು ಮುಂದಾಗಿದ್ದ. ಅವಾಗಲೇ ಲಾರಿ ಚಕ್ರ ಸೆಕ್ಯುರಿಟಿ ಸಿಬ್ಬಂದಿ ಮೇಲೆ ಹರಿದಿತ್ತು.’</p>.<p>‘ಮಹೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬ ಸಿಬ್ಬಂದಿಗೂ ಗಾಯವಾಗಿದ್ದು, ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುನ್ನೇಕೊಳಾಲು ಬಳಿಯ ರೈಲ್ವೆ ಕೆಳ ಸೇತುವೆ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಲಾರಿ ಚಕ್ರ ಮೈ ಮೇಲೆ ಹರಿದು ಸೆಕ್ಯುರಿಟಿ ಸಿಬ್ಬಂದಿ ಮಹೇಶ್ (24) ಮೃತಪಟ್ಟಿದ್ದಾರೆ.</p>.<p>‘ಜಾರ್ಖಂಡ್ನ ಮಹೇಶ್, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದರು. ಖಾಸಗಿ ಏಜೆನ್ಸಿಯೊಂದರಲ್ಲಿ ಸೆಕ್ಯುರಿಟಿ ಸಿಬ್ಬಂದಿ ಆಗಿ ಕೆಲಸಕ್ಕೆ ಸೇರಿದ್ದರು. ಕಾಮಗಾರಿ ಸ್ಥಳದಲ್ಲಿ ಸಾಮಗ್ರಿಗಳನ್ನು ಕಾಯುವ ಕರ್ತವ್ಯಕ್ಕೆ ಅವರನ್ನು ನಿಯೋಜಿಸಲಾಗಿತ್ತು. ಅದೇ ಸ್ಥಳದಲ್ಲಿ ಮಂಗಳವಾರ ರಾತ್ರಿ ಈ ಅವಘಡ ಸಂಭವಿಸಿದೆ’ ಎಂದು ಎಚ್ಎಎಲ್ ಸಂಚಾರ ಠಾಣೆ ಪೊಲೀಸ್ ಮೂಲಗಳು ಹೇಳಿವೆ.</p>.<p>‘ಮಹೇಶ್ ಹಾಗೂ ಮತ್ತೊಬ್ಬ ಸೆಕ್ಯುರಿಟಿ ಸಿಬ್ಬಂದಿ ಸ್ಥಳದಲ್ಲಿದ್ದರು. ತಡರಾತ್ರಿ 1 ಗಂಟೆ ಸುಮಾರಿಗೆ ನಿದ್ದೆಗೆ ಜಾರಿದ್ದರು. ಅದೇ ಸಂದರ್ಭದಲ್ಲಿ ಟಿಪ್ಪರ್ ಲಾರಿಯೊಂದು ಸ್ಥಳಕ್ಕೆ ಬಂದಿತ್ತು. ಮಲಗಿದ್ದ ಸೆಕ್ಯುರಿಟಿ ಸಿಬ್ಬಂದಿಯನ್ನು ಚಾಲಕ ನೋಡಿರಲಿಲ್ಲ. ಲಾರಿ ಹಿಂದಕ್ಕೆ ಚಲಿಸಲು ಮುಂದಾಗಿದ್ದ. ಅವಾಗಲೇ ಲಾರಿ ಚಕ್ರ ಸೆಕ್ಯುರಿಟಿ ಸಿಬ್ಬಂದಿ ಮೇಲೆ ಹರಿದಿತ್ತು.’</p>.<p>‘ಮಹೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬ ಸಿಬ್ಬಂದಿಗೂ ಗಾಯವಾಗಿದ್ದು, ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>