<p><strong>ಬೆಂಗಳೂರು:</strong> ಬಸವನಗುಡಿ ಠಾಣೆ ವ್ಯಾಪ್ತಿಯ ಸುಬ್ಬಣ್ಣ ಚೆಟ್ಟಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಸಿದ್ದರಾಜು (26) ಎಂಬುವರ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.</p>.<p>'ಕೊಳ್ಳೆಗಾಲದ ಸಿದ್ದರಾಜು, ಲಾರಿ ಕ್ಲೀನರ್ ಆಗಿದ್ದರು. ಅವರ ಮೃತದೇಹದ ಮೇಲೆ ಗಾಯದ ಗುರುತುಗಳಿದ್ದವು. ಸ್ಥಳೀಯರು ನೀಡಿದ ಮಾಹಿತಿಯಂತೆ ಪೊಲೀಸರು ಸ್ಥಳಕ್ಕೆ ಹೋಗಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ' ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ತಿಳಿಸಿದರು.</p>.<p>ಬಿಟ್ಟುಹೋಗಿದ್ದ ಪತ್ನಿ; 'ಸಿದ್ದರಾಜು ಅವರು ಹೂವು ಮಾರುವ ಲತಾ (28) ಎಂಬುವರನ್ನು ವರ್ಷದ ಹಿಂದೆ ಮದುವೆಯಾಗಿದ್ದರು. ಆದರೆ, ಕೌಟುಂಬಿಕ ಕಲಹದಿಂದ ದಂಪತಿ ಬೇರೆಯಾಗಿದ್ದರು' ಎಂದು ಪೊಲೀಸರು ಹೇಳಿದರು.</p>.<p>'ಸಿದ್ದರಾಜುನನ್ನು ಬಿಟ್ಟು ಹೋಗಿದ್ದ ಲತಾ, ಲಕ್ಷ್ಮಣ ಅಲಿಯಾಸ್ ಲಚ್ಚಿ ಎಂಬಾತನನ್ನು ಮದುವೆಯಾಗಿದ್ದಳು. ತಾಯಿಯ ಮನೆಯಲ್ಲಿ ಉಳಿದುಕೊಂಡಿದ್ದಳು. ಅದರಿಂದ ಸಿಟ್ಟಾಗಿದ್ದ ಸಿದ್ದರಾಜು, ಲತಾ ತವರು ಮನೆಗೆ ಹೋಗಿ ಗಲಾಟೆ ಮಾಡುತ್ತಿದ್ದ.'</p>.<p>'ಶುಕ್ರವಾರವೂ ಮನೆ ಬಳಿ ಹೋಗಿ ಗಲಾಟೆ ಮಾಡಿದ್ದ. ಲತಾ ಹಾಗೂ ಅವರ ತಾಯಿ ಮೇಲೆ ಹಲ್ಲೆಗೂ ಯತ್ನಿಸಿದ್ದ. ಇದು ಗೊತ್ತಾಗುತ್ತಿದ್ದಂತೆ ಲಕ್ಷ್ಮಣ, ಸಿದ್ದರಾಜುನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ' ಎಂದೂ ಪೊಲೀಸರು ತಿಳಿಸಿದರು.</p>.<p>'ಲಾರಿ ಬಳಿಯೇ ತಡರಾತ್ರಿ ಸಿದ್ದರಾಜು ಹಾಗೂ ಸ್ನೇಹಿತರು ಮದ್ಯ ಕುಡಿಯುತ್ತ ಕುಳಿತಿದ್ದರು. ಅಲ್ಲಿಗೆ ಬಂದಿದ್ದ ಲಕ್ಷ್ಮಣ, ಜಗಳ ತೆಗೆದು ಸಿದ್ದರಾಜುನನ್ನು ಕೊಂದು ಪರಾರಿಯಾಗಿದ್ದಾನೆ. ಈ ಸಂಬಂಧ ಬಸವನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ' ಎಂದೂ ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಸವನಗುಡಿ ಠಾಣೆ ವ್ಯಾಪ್ತಿಯ ಸುಬ್ಬಣ್ಣ ಚೆಟ್ಟಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಸಿದ್ದರಾಜು (26) ಎಂಬುವರ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.</p>.<p>'ಕೊಳ್ಳೆಗಾಲದ ಸಿದ್ದರಾಜು, ಲಾರಿ ಕ್ಲೀನರ್ ಆಗಿದ್ದರು. ಅವರ ಮೃತದೇಹದ ಮೇಲೆ ಗಾಯದ ಗುರುತುಗಳಿದ್ದವು. ಸ್ಥಳೀಯರು ನೀಡಿದ ಮಾಹಿತಿಯಂತೆ ಪೊಲೀಸರು ಸ್ಥಳಕ್ಕೆ ಹೋಗಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ' ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ತಿಳಿಸಿದರು.</p>.<p>ಬಿಟ್ಟುಹೋಗಿದ್ದ ಪತ್ನಿ; 'ಸಿದ್ದರಾಜು ಅವರು ಹೂವು ಮಾರುವ ಲತಾ (28) ಎಂಬುವರನ್ನು ವರ್ಷದ ಹಿಂದೆ ಮದುವೆಯಾಗಿದ್ದರು. ಆದರೆ, ಕೌಟುಂಬಿಕ ಕಲಹದಿಂದ ದಂಪತಿ ಬೇರೆಯಾಗಿದ್ದರು' ಎಂದು ಪೊಲೀಸರು ಹೇಳಿದರು.</p>.<p>'ಸಿದ್ದರಾಜುನನ್ನು ಬಿಟ್ಟು ಹೋಗಿದ್ದ ಲತಾ, ಲಕ್ಷ್ಮಣ ಅಲಿಯಾಸ್ ಲಚ್ಚಿ ಎಂಬಾತನನ್ನು ಮದುವೆಯಾಗಿದ್ದಳು. ತಾಯಿಯ ಮನೆಯಲ್ಲಿ ಉಳಿದುಕೊಂಡಿದ್ದಳು. ಅದರಿಂದ ಸಿಟ್ಟಾಗಿದ್ದ ಸಿದ್ದರಾಜು, ಲತಾ ತವರು ಮನೆಗೆ ಹೋಗಿ ಗಲಾಟೆ ಮಾಡುತ್ತಿದ್ದ.'</p>.<p>'ಶುಕ್ರವಾರವೂ ಮನೆ ಬಳಿ ಹೋಗಿ ಗಲಾಟೆ ಮಾಡಿದ್ದ. ಲತಾ ಹಾಗೂ ಅವರ ತಾಯಿ ಮೇಲೆ ಹಲ್ಲೆಗೂ ಯತ್ನಿಸಿದ್ದ. ಇದು ಗೊತ್ತಾಗುತ್ತಿದ್ದಂತೆ ಲಕ್ಷ್ಮಣ, ಸಿದ್ದರಾಜುನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ' ಎಂದೂ ಪೊಲೀಸರು ತಿಳಿಸಿದರು.</p>.<p>'ಲಾರಿ ಬಳಿಯೇ ತಡರಾತ್ರಿ ಸಿದ್ದರಾಜು ಹಾಗೂ ಸ್ನೇಹಿತರು ಮದ್ಯ ಕುಡಿಯುತ್ತ ಕುಳಿತಿದ್ದರು. ಅಲ್ಲಿಗೆ ಬಂದಿದ್ದ ಲಕ್ಷ್ಮಣ, ಜಗಳ ತೆಗೆದು ಸಿದ್ದರಾಜುನನ್ನು ಕೊಂದು ಪರಾರಿಯಾಗಿದ್ದಾನೆ. ಈ ಸಂಬಂಧ ಬಸವನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ' ಎಂದೂ ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>