<p><strong>ಬೆಂಗಳೂರು:</strong> ಲಾರಿ ಡಿಕ್ಕಿ ಹೊಡೆದು ಟೆಂಪೊದಲ್ಲಿದ್ದ ಮೂವರು ಮೃತಪಟ್ಟು, ಆರು ಮಂದಿ ಗಾಯಗೊಂಡಿರುವ ಘಟನೆ ನೆಲಮಂಗಲ ತಾಲ್ಲೂಕಿನ ಕುಲುವನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬಳಿ ಭಾನುವಾರ ಸಂಭವಿಸಿದೆ.</p>.<p>ಯಾದಗಿರಿಯ ಕಟ್ಟಡ ಕಾರ್ಮಿಕರಾದ ನರಸಪ್ಪ (35), ಹುಸೇನಪ್ಪ(34) ಮತ್ತು ಪಾದಚಾರಿ ತುಮಕೂರು ತಾಲ್ಲೂಕಿನ ಸೀತಕಲ್ಲು ನಿವಾಸಿ ಶಿವಗಂಗಪ್ಪ (55) ಮೃತರು.</p>.<p>ಕಾಂಕ್ರಿಟ್ ಮಿಕ್ಸರ್ ಟ್ರಾಲಿಯೊಂದಿಗೆ ಸಾಗುತ್ತಿದ್ದ ಟೆಂಪೊಗೆ ಲಾರಿ ಡಿಕ್ಕಿ ಹೊಡೆದಿದೆ. ನಂತರ ಮುಂದೆ ಹೋಗುತ್ತಿದ್ದ ಪಾದಚಾರಿಗೂ ಡಿಕ್ಕಿ ಹೊಡೆದಿದೆ.</p>.<p>ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಟೆಂಪೊದಲ್ಲಿದ್ದ ಯಾದಗಿರಿಯ ಲಕ್ಷ್ಮೀ, ಭಾನುಪ್ರಿಯಾ, ಅನಂತಪ್ಪ, ನಾಗರಾಜು, ಸಾಬಣ್ಣ, ಕಟ್ಟಪ್ಪ ಹಾಗೂ ಮೂವರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಂಗಾರಪ್ಪ ಎಂಬುವವರ ಸ್ಥಿತಿ ಗಂಭೀರವಾಗಿದೆ.</p>.<p>ಮೂವರು ಗಾಯಾಳುಗಳನ್ನು ನೆಲಮಂಗಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ನಂತರ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚಾರ ಅಸ್ತವ್ಯಸ್ತ ಉಂಟಾಗಿತ್ತು. ವಾಹನ ಸವಾರರು ಪರದಾಡಿದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಲಾರಿ ಡಿಕ್ಕಿ ಹೊಡೆದು ಟೆಂಪೊದಲ್ಲಿದ್ದ ಮೂವರು ಮೃತಪಟ್ಟು, ಆರು ಮಂದಿ ಗಾಯಗೊಂಡಿರುವ ಘಟನೆ ನೆಲಮಂಗಲ ತಾಲ್ಲೂಕಿನ ಕುಲುವನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬಳಿ ಭಾನುವಾರ ಸಂಭವಿಸಿದೆ.</p>.<p>ಯಾದಗಿರಿಯ ಕಟ್ಟಡ ಕಾರ್ಮಿಕರಾದ ನರಸಪ್ಪ (35), ಹುಸೇನಪ್ಪ(34) ಮತ್ತು ಪಾದಚಾರಿ ತುಮಕೂರು ತಾಲ್ಲೂಕಿನ ಸೀತಕಲ್ಲು ನಿವಾಸಿ ಶಿವಗಂಗಪ್ಪ (55) ಮೃತರು.</p>.<p>ಕಾಂಕ್ರಿಟ್ ಮಿಕ್ಸರ್ ಟ್ರಾಲಿಯೊಂದಿಗೆ ಸಾಗುತ್ತಿದ್ದ ಟೆಂಪೊಗೆ ಲಾರಿ ಡಿಕ್ಕಿ ಹೊಡೆದಿದೆ. ನಂತರ ಮುಂದೆ ಹೋಗುತ್ತಿದ್ದ ಪಾದಚಾರಿಗೂ ಡಿಕ್ಕಿ ಹೊಡೆದಿದೆ.</p>.<p>ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಟೆಂಪೊದಲ್ಲಿದ್ದ ಯಾದಗಿರಿಯ ಲಕ್ಷ್ಮೀ, ಭಾನುಪ್ರಿಯಾ, ಅನಂತಪ್ಪ, ನಾಗರಾಜು, ಸಾಬಣ್ಣ, ಕಟ್ಟಪ್ಪ ಹಾಗೂ ಮೂವರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಂಗಾರಪ್ಪ ಎಂಬುವವರ ಸ್ಥಿತಿ ಗಂಭೀರವಾಗಿದೆ.</p>.<p>ಮೂವರು ಗಾಯಾಳುಗಳನ್ನು ನೆಲಮಂಗಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ನಂತರ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚಾರ ಅಸ್ತವ್ಯಸ್ತ ಉಂಟಾಗಿತ್ತು. ವಾಹನ ಸವಾರರು ಪರದಾಡಿದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>