‘ಪೊಲೀಸರನ್ನು ನೋಡಿದ್ದ ಆರೋಪಿ ಇಮ್ರಾನ್, ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಹಿಡಿಯಲು ಬಂದ ಹೆಡ್ ಕಾನ್ಸ್ಟೆಬಲ್ ಅಶೋಕ್ ಮೇಲೆ ಹಲ್ಲೆ ಮಾಡಿದ್ದ. ರಕ್ಷಣೆಗೆ ಹೋದ ಪಿಎಸ್ಐ ಮಧುಸೂದನ್, ಪಿಸ್ತೂಲ್ ತೋರಿಸಿ ಶರಣಾಗುವಂತೆ ಆರೋಪಿಗೆ ಹೇಳಿದ್ದರು. ಅವರ ಮೇಲೂ ಆರೋಪಿ ಹಲ್ಲೆಗೆ ಮುಂದಾಗಿದ್ದ. ಅದೇ ಸಂದರ್ಭದಲ್ಲೇ ಆತ್ಮರಕ್ಷಣೆಗಾಗಿ ಪಿಎಸ್ಐ, ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ’ ಎಂದೂ ಅಧಿಕಾರಿ ವಿವರಿಸಿದರು.