‘ಆನ್ಲೈನ್ ಮೂಲಕ ವಂಚನೆ ಮಾಡುವುದರಲ್ಲಿ ಪರಿಣಿತಿ ಹೊಂದಿದ್ದ ಹರ್ಷಿದ್, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹೋಟೆಲೊಂದರಲ್ಲಿ ಬಾಣಸಿಗನಾಗಿದ್ದ ಅಪ್ಪಾಜಿಯನ್ನು ಪರಿಚಯ ಮಾಡಿಕೊಂಡಿದ್ದ. ನಂತರ ಇಬ್ಬರೂ ಸೇರಿ ಇತರ ಸಹಚರರ ಜೊತೆ ಕೃತ್ಯ ಎಸಗಲಾರಂಭಿಸಿದ್ದರು. ಪರಿಚಯಸ್ಥರ ಬ್ಯಾಂಕ್ ಖಾತೆ ವಿವರ ಪಡೆದು ಕೃತ್ಯಕ್ಕೆ ಬಳಸುತ್ತಿದ್ದರು. ಖಾತೆಯೊಂದರ ಮಾಹಿತಿಯಿಂದಲೇ ಆರೋಪಿಗಳು ಸಿಕ್ಕಿಬಿದ್ದರು.’