<p>ಬೆಂಗಳೂರು: ಶಬ್ದ ಮಾಲಿನ್ಯದ ದೂರುಗಳ ಆಧಾರದ ಮೇಲೆ ಕೈಗೊಂಡ ಕ್ರಮಗಳ ವಿವರ ಸಲ್ಲಿಸುವಂತೆ ನಗರ ಪೊಲೀಸ್ ಕಮಿಷನರ್ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ (ಕೆಎಸ್ಪಿಸಿಬಿ) ಅಧ್ಯಕ್ಷರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯೂಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.</p>.<p>‘ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು ನಿಯಂತ್ರಣ) ನಿಯಮಗಳ–2000ರ ನಿಬಂಧನೆಗಳನ್ನು ಉಲ್ಲಂಘಿಸಿ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸಲಾಗುತ್ತಿದೆ’ ಎಂದು ಅರ್ಜಿದಾರರು ದೂರಿದ್ದಾರೆ</p>.<p>‘ಈ ವಿಷಯದಲ್ಲಿ ಕಾನೂನು ಜಾರಿಗೆ ತರುವ ಬದಲು ಕೆಎಸ್ಪಿಸಿಬಿ ಹಿರಿಯ ಅಧಿಕಾರಿಗಳು ಅಂಚೆ ಸಿಬ್ಬಂದಿ ರೀತಿ ವರ್ತಿಸುತ್ತಿದ್ದಾರೆ. ದೂರುಗಳನ್ನು ಪೊಲೀಸ್ ಕಮಿಷನರ್ ಮತ್ತು ಬಿಬಿಎಂಪಿಗೆ ರವಾನಿಸಿ ಸುಮ್ಮನಾಗುತ್ತಿದ್ದಾರೆ’ ಎಂದು ಪೀಠ ಅಭಿಪ್ರಾಯಪಟ್ಟಿತು.</p>.<p>‘ಕಾನೂನಿನಲ್ಲಿ ಇರುವ ಅಧಿಕಾರ ಬಳಸಿ ಕ್ರಿಮಿನಲ್ ಕ್ರಮಗಳನ್ನು ಕೆಎಸ್ಪಿಸಿಬಿ ಪ್ರಾದೇಶಿಕ ಅಧಿಕಾರಿಗಳು ಕೈಗೊಳ್ಳಬೇಕು. ಹಿರಿಯ ಪರಿಸರ ಅಧಿಕಾರಿಗಳು ವಹಿಸಿರುವ ಪಾತ್ರವನ್ನು ಪರಿಶೀಲಿಸುವಂತೆ ಕೆಎಸ್ಪಿಸಿಬಿ ಅಧ್ಯಕ್ಷರಿಗೆ ನಿರ್ದೇಶನ ನೀಡಲಾಗುತ್ತಿದೆ’ ಎಂದು ಪೀಠ ತಿಳಿಸಿತು.</p>.<p>‘ಸ್ವೀಕರಿಸಿದ ದೂರುಗಳ ಆಧಾರದಲ್ಲಿ ಕ್ರಮ ಕೈಗೊಂಡಿರುವ ಸಂಬಂಧ ಪೊಲೀಸ್ ಅಧಿಕಾರಿಗಳು ಅಫಿಡವಿಟ್ ಸಲ್ಲಿಸಬೇಕು’ ಎಂದು ತಿಳಿಸಿದ ಪೀಠ, ವಿಚಾರಣೆಯನ್ನುಜೂ.17ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಶಬ್ದ ಮಾಲಿನ್ಯದ ದೂರುಗಳ ಆಧಾರದ ಮೇಲೆ ಕೈಗೊಂಡ ಕ್ರಮಗಳ ವಿವರ ಸಲ್ಲಿಸುವಂತೆ ನಗರ ಪೊಲೀಸ್ ಕಮಿಷನರ್ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ (ಕೆಎಸ್ಪಿಸಿಬಿ) ಅಧ್ಯಕ್ಷರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯೂಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.</p>.<p>‘ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು ನಿಯಂತ್ರಣ) ನಿಯಮಗಳ–2000ರ ನಿಬಂಧನೆಗಳನ್ನು ಉಲ್ಲಂಘಿಸಿ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸಲಾಗುತ್ತಿದೆ’ ಎಂದು ಅರ್ಜಿದಾರರು ದೂರಿದ್ದಾರೆ</p>.<p>‘ಈ ವಿಷಯದಲ್ಲಿ ಕಾನೂನು ಜಾರಿಗೆ ತರುವ ಬದಲು ಕೆಎಸ್ಪಿಸಿಬಿ ಹಿರಿಯ ಅಧಿಕಾರಿಗಳು ಅಂಚೆ ಸಿಬ್ಬಂದಿ ರೀತಿ ವರ್ತಿಸುತ್ತಿದ್ದಾರೆ. ದೂರುಗಳನ್ನು ಪೊಲೀಸ್ ಕಮಿಷನರ್ ಮತ್ತು ಬಿಬಿಎಂಪಿಗೆ ರವಾನಿಸಿ ಸುಮ್ಮನಾಗುತ್ತಿದ್ದಾರೆ’ ಎಂದು ಪೀಠ ಅಭಿಪ್ರಾಯಪಟ್ಟಿತು.</p>.<p>‘ಕಾನೂನಿನಲ್ಲಿ ಇರುವ ಅಧಿಕಾರ ಬಳಸಿ ಕ್ರಿಮಿನಲ್ ಕ್ರಮಗಳನ್ನು ಕೆಎಸ್ಪಿಸಿಬಿ ಪ್ರಾದೇಶಿಕ ಅಧಿಕಾರಿಗಳು ಕೈಗೊಳ್ಳಬೇಕು. ಹಿರಿಯ ಪರಿಸರ ಅಧಿಕಾರಿಗಳು ವಹಿಸಿರುವ ಪಾತ್ರವನ್ನು ಪರಿಶೀಲಿಸುವಂತೆ ಕೆಎಸ್ಪಿಸಿಬಿ ಅಧ್ಯಕ್ಷರಿಗೆ ನಿರ್ದೇಶನ ನೀಡಲಾಗುತ್ತಿದೆ’ ಎಂದು ಪೀಠ ತಿಳಿಸಿತು.</p>.<p>‘ಸ್ವೀಕರಿಸಿದ ದೂರುಗಳ ಆಧಾರದಲ್ಲಿ ಕ್ರಮ ಕೈಗೊಂಡಿರುವ ಸಂಬಂಧ ಪೊಲೀಸ್ ಅಧಿಕಾರಿಗಳು ಅಫಿಡವಿಟ್ ಸಲ್ಲಿಸಬೇಕು’ ಎಂದು ತಿಳಿಸಿದ ಪೀಠ, ವಿಚಾರಣೆಯನ್ನುಜೂ.17ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>