ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೇಯಸಿಗೆ ಮಚ್ಚಿನಿಂದ ಹಲ್ಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ

Last Updated 27 ಮೇ 2020, 19:07 IST
ಅಕ್ಷರ ಗಾತ್ರ

ಬೆಂಗಳೂರು: ಪ್ರೇಯಸಿಯನ್ನು ಮಚ್ಚಿನಿಂದ ಕೊಚ್ಚಿ ಪರಾರಿಯಾದ ಪ್ರಿಯಕರ, ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಾನು ಪ್ರೀತಿಸುತ್ತಿದ್ದ ಮದ್ದೂರಿನ ಯುವತಿಯತಲೆ, ಕಾಲು, ಹೊಟ್ಟೆ ಭಾಗಕ್ಕೆ ಬುಧವಾರ ಬೆಳಿಗ್ಗೆ 11.30ರ ಸುಮಾರಿಗೆ ನಾಗರಬಾವಿ ಬಳಿ ಅನ್ನಪೂರ್ಣೇಶ್ವರಿ ನಗರದ ವಿಶಾಲ್‌ ಮಾರ್ಟ್‌ ಸಮೀಪ ಮಚ್ಚಿನಿಂದ ಹಲ್ಲೆ ನಡೆಸಿದ್ದ ಗಿರೀಶ್‌ ಎಂಬಾತ ಬಳಿಕ ತಲೆಮರೆಸಿಕೊಂಡಿದ್ದ. ಗಾಯಗೊಂಡಿರುವ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆದರೆ, ಸ್ಥಳದಿಂದ ಪರಾರಿಯಾಗಿದ್ದ ಗಿರೀಶ್‌, ಮಾಗಡಿ ರಸ್ತೆಯ ತಾವರೆಕೆರೆ ಠಾಣಾ ವ್ಯಾಪ್ತಿಯ ಗಾಣಕಲ್‌ ಪೆದ್ದಪ್ಪನಪಾಳ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನನ್ನು ವಿವಾಹವಾಗಲು ಪ್ರೇಯಸಿ ನಿರಾಕರಿಸಿದ್ದೇ ಆತ ಈ ಕೃತ್ಯ ಎಸಗಲು ಕಾರಣ ಎನ್ನಲಾಗಿದೆ. ಬಳಿಕ ಸಿಕ್ಕಿಹಾಕಿಕೊಳ್ಳುವ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ.

ಕಾಲೇಜು ದಿನಗಳಿಂದಲೇ ಗಿರೀಶ್‌ ಮತ್ತು ಯುವತಿ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಓದು ಮುಗಿದ ಬಳಿಕ ಬೆಂಗಳೂರಿಗೆ ಬಂದಿದ್ದ ಯುವತಿ ಪಾಪರೆಡ್ಡಿಪಾಳ್ಯದಲ್ಲಿ ವಾಸವಿದ್ದಳು. ಅಲ್ಲದೆ, ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಖಾಸಗಿ ಆಸ್ಪತ್ರೆಯೊಂದರಲ್ಲಿ ಗಿರೀಶ್, ಸೆಕ್ಯೂರಿಟಿ ಸೂಪರ್ ವೈಸರ್ ಆಗಿದ್ದ. ಕೆಲವು ತಿಂಗಳುಗಳಿಂದ ಅವರಿಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು.

ಇಬ್ಬರ ನಡುವಿನ ಗಲಾಟೆ ಹಿಂದೊಮ್ಮೆ ಪೊಲೀಸ್ ಠಾಣೆಯವರೆಗೂ ಹೋಗಿತ್ತು. ಬಳಿಕ ರಾಜಿ ಮಾಡಿಕೊಂಡಿದ್ದ ಇಬ್ಬರೂ, ಸುಮ್ಮನಾಗಿದ್ದರು. ಆದರೆ, ಗಿರೀಶ್‌ ಮತ್ತೆ ಆ ಯುವತಿಯ ಬೆನ್ನುಬಿದ್ದಿದ್ದ. ಈ ವಿಷಯ ಗೊತ್ತಾಗಿ ಆಕೆಯ ಮನೆಯವರು ಜೂನ್ ತಿಂಗಳಲ್ಲಿ ಆಕೆಗೆ ಮದುವೆ ಮಾಡಲು ತಯಾರಿ ನಡೆಸಿದ್ದರು ಎನ್ನಲಾಗಿದೆ. ಈ ವಿಷಯ ತಿಳಿದ ಬಳಿಕ ಗಿರೀಶ್ ಕೋಪಗೊಂಡಿದ್ದ. ಬಟ್ಟೆ ಖರೀದಿಗೆ ನಗರಕ್ಕೆ ಬಂದಿದ್ದ ವೇಳೆ ಗಿರೀಶ್ ಆಕೆಯ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ. ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT