<p><strong>ಬೆಂಗಳೂರು: </strong>ಒಡಿಶಾದ 25ರ ಹರೆಯದ ಯುವತಿ ಮೇಲೆ ನಾಡ ಪಿಸ್ತೂಲಿನಿಂದ ಗುಂಡು ಹಾರಿಸಿ ಪರಾರಿಯಾಗಿದ್ದ ಆರೋಪಿ ಗಂಭೀರ ಸ್ಥಿತಿಯಲ್ಲಿ ಮಾರತ್ತಹಳ್ಳಿ ಸೇತುವೆ ಬಳಿಯ ಹೊರವರ್ತುಲ ರಸ್ತೆಯಲ್ಲಿ ಬುಧವಾರ ನಸುಕಿನ 2.30ರ ಸುಮಾರಿಗೆ ಪತ್ತೆಯಾಗಿದ್ದಾನೆ.</p>.<p>ಆರೋಪಿಯನ್ನು ಒಡಿಶಾ ನಿವಾಸಿ, ನಗರದ ಖಾಸಗಿ ಕಂಪನಿಯೊಂದರ ಸಾಫ್ಟ್ ವೇರ್ ಎಂಜಿನಿಯರ್ ಅಮರೇಂದ್ರ ಪಟ್ಟನಾಯಕ್ (33) ಎಂದು ಗುರುತಿಸಲಾಗಿದೆ. ಈತನನ್ನು ಸಾಕ್ರಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆರೋಪಿಯ ಕತ್ತಿನ ಭಾಗದಲ್ಲಿ ಕೊಯ್ದುಕೊಂಡಂತೆ ಕಾಣುತ್ತಿದೆ. ದೇಹದ ಮೇಲೆ ಅಪಘಾತದಿಂದ ಅಗಿರುವ ಗಾಯಗಳು ಪತ್ತೆಯಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.</p>.<p>ಘಟನಾ ಸ್ಥಳದಲ್ಲಿ ಆರೋಪಿಯ ಕೈಬರಹ ಇರುವ 17 ಪುಟಗಳ ನೋಟ್ ಪುಸ್ತಕ ಸಿಕ್ಕಿದೆ. ಅದರ ಕೊನೆಯ ಪುಟದಲ್ಲಿ ತನ್ನ ಕೊನೆ ಆಸೆಯ ಬಗ್ಗೆ ಉಲ್ಲೇಖಿಸಿದ್ದು, ಮರಣಪತ್ರದಂತೆ ಕಾಣುತ್ತಿದೆ ಎಂದು ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್ ತಿಳಿಸಿದ್ದಾರೆ.</p>.<p>ಆದರೆ, ಈ ಟಿಪ್ಪಣಿಗೂ ವಾಸ್ತವಕ್ಕೂ ತಾಳೆ ಆಗುತ್ತಿಲ್ಲ. ಆರೋಪಿ ಗುಣಮುಖವಾದ ಬಳಿಕ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>ಪಟ್ಟನಾಯಕ್ ಮಂಗಳವಾರ ಸಂಜೆ ಆರು ಗಂಟೆ ಸುಮಾರಿಗೆ ತನ್ನ ಪ್ರೇಯಸಿ ಪ್ರಿಯದರ್ಶಿನಿಯ ಹತ್ಯೆಗೆ ಯತ್ನಿಸಿದ್ದ. ಒಡಿಶಾದ ಈ ಯುವತಿ ನಿಮ್ಹಾನ್ಸ್ನಲ್ಲಿ ಕೆಲಸ ಮಾಡುತ್ತಿದ್ದು, ಎರಡು ವರ್ಷಗಳಿಂದ ನಗರದಲ್ಲಿದ್ದಾರೆ. ಇವರು ತಂಗಿರುವ ‘ಪೇಯಿಂಗ್ ಗೆಸ್ಟ್’ (ಪಿ.ಜಿ) ಮುಂಭಾಗದಲ್ಲೇ ನಡೆದಿದೆ. 7.65ಎಂ.ಎಂ ನಾಡ ಪಿಸ್ತೂಲ್ನಿಂದ ಒಂದು ಸುತ್ತು ಗುಂಡು ಹಾರಿಸಲಾಗಿತ್ತು. ಯುವತಿ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಒಡಿಶಾದ 25ರ ಹರೆಯದ ಯುವತಿ ಮೇಲೆ ನಾಡ ಪಿಸ್ತೂಲಿನಿಂದ ಗುಂಡು ಹಾರಿಸಿ ಪರಾರಿಯಾಗಿದ್ದ ಆರೋಪಿ ಗಂಭೀರ ಸ್ಥಿತಿಯಲ್ಲಿ ಮಾರತ್ತಹಳ್ಳಿ ಸೇತುವೆ ಬಳಿಯ ಹೊರವರ್ತುಲ ರಸ್ತೆಯಲ್ಲಿ ಬುಧವಾರ ನಸುಕಿನ 2.30ರ ಸುಮಾರಿಗೆ ಪತ್ತೆಯಾಗಿದ್ದಾನೆ.</p>.<p>ಆರೋಪಿಯನ್ನು ಒಡಿಶಾ ನಿವಾಸಿ, ನಗರದ ಖಾಸಗಿ ಕಂಪನಿಯೊಂದರ ಸಾಫ್ಟ್ ವೇರ್ ಎಂಜಿನಿಯರ್ ಅಮರೇಂದ್ರ ಪಟ್ಟನಾಯಕ್ (33) ಎಂದು ಗುರುತಿಸಲಾಗಿದೆ. ಈತನನ್ನು ಸಾಕ್ರಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆರೋಪಿಯ ಕತ್ತಿನ ಭಾಗದಲ್ಲಿ ಕೊಯ್ದುಕೊಂಡಂತೆ ಕಾಣುತ್ತಿದೆ. ದೇಹದ ಮೇಲೆ ಅಪಘಾತದಿಂದ ಅಗಿರುವ ಗಾಯಗಳು ಪತ್ತೆಯಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.</p>.<p>ಘಟನಾ ಸ್ಥಳದಲ್ಲಿ ಆರೋಪಿಯ ಕೈಬರಹ ಇರುವ 17 ಪುಟಗಳ ನೋಟ್ ಪುಸ್ತಕ ಸಿಕ್ಕಿದೆ. ಅದರ ಕೊನೆಯ ಪುಟದಲ್ಲಿ ತನ್ನ ಕೊನೆ ಆಸೆಯ ಬಗ್ಗೆ ಉಲ್ಲೇಖಿಸಿದ್ದು, ಮರಣಪತ್ರದಂತೆ ಕಾಣುತ್ತಿದೆ ಎಂದು ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್ ತಿಳಿಸಿದ್ದಾರೆ.</p>.<p>ಆದರೆ, ಈ ಟಿಪ್ಪಣಿಗೂ ವಾಸ್ತವಕ್ಕೂ ತಾಳೆ ಆಗುತ್ತಿಲ್ಲ. ಆರೋಪಿ ಗುಣಮುಖವಾದ ಬಳಿಕ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>ಪಟ್ಟನಾಯಕ್ ಮಂಗಳವಾರ ಸಂಜೆ ಆರು ಗಂಟೆ ಸುಮಾರಿಗೆ ತನ್ನ ಪ್ರೇಯಸಿ ಪ್ರಿಯದರ್ಶಿನಿಯ ಹತ್ಯೆಗೆ ಯತ್ನಿಸಿದ್ದ. ಒಡಿಶಾದ ಈ ಯುವತಿ ನಿಮ್ಹಾನ್ಸ್ನಲ್ಲಿ ಕೆಲಸ ಮಾಡುತ್ತಿದ್ದು, ಎರಡು ವರ್ಷಗಳಿಂದ ನಗರದಲ್ಲಿದ್ದಾರೆ. ಇವರು ತಂಗಿರುವ ‘ಪೇಯಿಂಗ್ ಗೆಸ್ಟ್’ (ಪಿ.ಜಿ) ಮುಂಭಾಗದಲ್ಲೇ ನಡೆದಿದೆ. 7.65ಎಂ.ಎಂ ನಾಡ ಪಿಸ್ತೂಲ್ನಿಂದ ಒಂದು ಸುತ್ತು ಗುಂಡು ಹಾರಿಸಲಾಗಿತ್ತು. ಯುವತಿ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>