<p><strong>ಬೆಂಗಳೂರು</strong>: ಸಂಪೂರ್ಣ ಚಂದ್ರಗ್ರಹಣವು ಇದೇ ಭಾನುವಾರ ಸಂಭವಿಸಲಿದ್ದು, ಜವಾಹರಲಾಲ್ ನೆಹರೂ ತಾರಾಲಯ ಸೇರಿ ವಿವಿಧೆಡೆ ಗ್ರಹಣ ವೀಕ್ಷಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. </p>.<p>ಶುಕ್ರವಾರ ಇಲ್ಲಿ ವೀಕ್ಷಕರ ವೇದಿಕೆ ಕರ್ನಾಟಕ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜವಾಹರಲಾಲ್ ನೆಹರೂ ತಾರಾಲಯದ ನಿರ್ದೇಶಕ ಬಿ.ಆರ್. ಗುರುಪ್ರಸಾದ್, ‘ಕರ್ನಾಟಕ ಸೇರಿದಂತೆ ದೇಶದಾದ್ಯಂತ ಈ ಗ್ರಹಣ ಗೋಚರಿಸಲಿದೆ. ಅಪರೂಪದ ಈ ಘಟನೆಯನ್ನು ಬರಿಗಣ್ಣಿನಿಂದ ಸುಲಭವಾಗಿ ವೀಕ್ಷಿಸಬಹುದು. ಚಂದ್ರ ಮತ್ತು ಸೂರ್ಯನ ನಡುವೆ ಭೂಮಿ ಬಂದಾಗ ನಡೆಯುವ ಈ ನೆರಳಿನ ಆಟವನ್ನು ಎಲ್ಲರೂ ಮನೆಯಿಂದ ಹೊರಬಂದು ಕಣ್ತುಂಬಿಕೊಳ್ಳಬಹುದು’ ಎಂದರು. </p>.<p>‘ಭಾನುವಾರ ರಾತ್ರಿ 9.57ರಿಂದ ಗ್ರಹಣ ಪ್ರಕ್ರಿಯೆ ಆರಂಭವಾಗಲಿದೆ. 11.01ರಿಂದ 12.23ರ ಅವಧಿಯಲ್ಲಿ ಸಂಪೂರ್ಣ ಚಂದ್ರಗ್ರಹಣ ಸಂಭವಿಸಲಿದ್ದು, ಸೋಮವಾರ ಮುಂಜಾನೆ 2.25ಕ್ಕೆ ಅಂತ್ಯಗೊಳ್ಳುತ್ತದೆ. ಗ್ರಹಣದ ಸಮಯ ತಡ ರಾತ್ರಿವರೆಗೂ ಈ ಪ್ರಕ್ರಿಯೆಯನ್ನು ಬರಿಗಣ್ಣಿನಿಂದ ವೀಕ್ಷಿಸಬಹುದು. ವಿವಿಧ ಸಂಸ್ಥೆಗಳು ಸಹ ಗ್ರಹಣ ವೀಕ್ಷಣಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಿವೆ. ಮುಂದಿನ ಸಂಪೂರ್ಣ ಚಂದ್ರಗ್ರಹಣವು 2028ರ ಡಿ.31ರಂದು ನಡೆಯಲಿದೆ’ ಎಂದು ಹೇಳಿದರು. </p>.<p><strong>ಸಾರ್ವಜನಿಕ ಕಾರ್ಯಕ್ರಮ</strong>: ಗ್ರಹಣ ವೀಕ್ಷಣೆಗೆ ನಗರದ ವಿವಿಧೆಡೆ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಉಪನ್ಯಾಸ, ರಸಪ್ರಶ್ನೆ, ಗ್ರಹಣ ಮಾದರಿ ಪ್ರದರ್ಶನಗಳು ನಡೆಯಲಿವೆ. ಜವಾಹರಲಾಲ್ ನೆಹರೂ ತಾರಾಲಯದಲ್ಲಿ ಭಾನುವಾರ ಸಂಜೆ 7 ಗಂಟೆಯಿಂದ ಗ್ರಹಣ ವೀಕ್ಷಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 200 ಮಂದಿಗೆ ಅವಕಾಶ ಕಲ್ಪಿಸಲಾಗಿದೆ.</p>.<p>ವಿಜಯನಗರದಲ್ಲಿ ಯಂಗ್ ಇನ್ನೋವೇಟರ್ಸ್ ಎಜುಕೇಷನಲ್ ಸರ್ವಿಸಸ್ ಸಂಸ್ಥೆ ರಾತ್ರಿ 9 ಗಂಟೆಯಿಂದ, ಕೋರಮಂಗಲದಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ಹಾಗೂ ಲಾಲ್ಬಾಗ್ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯ ರಾತ್ರಿ 8.30ರಿಂದ ಹಾಗೂ ರಾಜಾಜಿನಗರದಲ್ಲಿರುವ ಬ್ರೇಕಥ್ರೂ ಸೈನ್ಸ್ ಸೊಸೈಟಿ ಸಂಜೆ 7 ಗಂಟೆಯಿಂದ ಗ್ರಹಣ ವೀಕ್ಷಣೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಂಪೂರ್ಣ ಚಂದ್ರಗ್ರಹಣವು ಇದೇ ಭಾನುವಾರ ಸಂಭವಿಸಲಿದ್ದು, ಜವಾಹರಲಾಲ್ ನೆಹರೂ ತಾರಾಲಯ ಸೇರಿ ವಿವಿಧೆಡೆ ಗ್ರಹಣ ವೀಕ್ಷಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. </p>.<p>ಶುಕ್ರವಾರ ಇಲ್ಲಿ ವೀಕ್ಷಕರ ವೇದಿಕೆ ಕರ್ನಾಟಕ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜವಾಹರಲಾಲ್ ನೆಹರೂ ತಾರಾಲಯದ ನಿರ್ದೇಶಕ ಬಿ.ಆರ್. ಗುರುಪ್ರಸಾದ್, ‘ಕರ್ನಾಟಕ ಸೇರಿದಂತೆ ದೇಶದಾದ್ಯಂತ ಈ ಗ್ರಹಣ ಗೋಚರಿಸಲಿದೆ. ಅಪರೂಪದ ಈ ಘಟನೆಯನ್ನು ಬರಿಗಣ್ಣಿನಿಂದ ಸುಲಭವಾಗಿ ವೀಕ್ಷಿಸಬಹುದು. ಚಂದ್ರ ಮತ್ತು ಸೂರ್ಯನ ನಡುವೆ ಭೂಮಿ ಬಂದಾಗ ನಡೆಯುವ ಈ ನೆರಳಿನ ಆಟವನ್ನು ಎಲ್ಲರೂ ಮನೆಯಿಂದ ಹೊರಬಂದು ಕಣ್ತುಂಬಿಕೊಳ್ಳಬಹುದು’ ಎಂದರು. </p>.<p>‘ಭಾನುವಾರ ರಾತ್ರಿ 9.57ರಿಂದ ಗ್ರಹಣ ಪ್ರಕ್ರಿಯೆ ಆರಂಭವಾಗಲಿದೆ. 11.01ರಿಂದ 12.23ರ ಅವಧಿಯಲ್ಲಿ ಸಂಪೂರ್ಣ ಚಂದ್ರಗ್ರಹಣ ಸಂಭವಿಸಲಿದ್ದು, ಸೋಮವಾರ ಮುಂಜಾನೆ 2.25ಕ್ಕೆ ಅಂತ್ಯಗೊಳ್ಳುತ್ತದೆ. ಗ್ರಹಣದ ಸಮಯ ತಡ ರಾತ್ರಿವರೆಗೂ ಈ ಪ್ರಕ್ರಿಯೆಯನ್ನು ಬರಿಗಣ್ಣಿನಿಂದ ವೀಕ್ಷಿಸಬಹುದು. ವಿವಿಧ ಸಂಸ್ಥೆಗಳು ಸಹ ಗ್ರಹಣ ವೀಕ್ಷಣಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಿವೆ. ಮುಂದಿನ ಸಂಪೂರ್ಣ ಚಂದ್ರಗ್ರಹಣವು 2028ರ ಡಿ.31ರಂದು ನಡೆಯಲಿದೆ’ ಎಂದು ಹೇಳಿದರು. </p>.<p><strong>ಸಾರ್ವಜನಿಕ ಕಾರ್ಯಕ್ರಮ</strong>: ಗ್ರಹಣ ವೀಕ್ಷಣೆಗೆ ನಗರದ ವಿವಿಧೆಡೆ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಉಪನ್ಯಾಸ, ರಸಪ್ರಶ್ನೆ, ಗ್ರಹಣ ಮಾದರಿ ಪ್ರದರ್ಶನಗಳು ನಡೆಯಲಿವೆ. ಜವಾಹರಲಾಲ್ ನೆಹರೂ ತಾರಾಲಯದಲ್ಲಿ ಭಾನುವಾರ ಸಂಜೆ 7 ಗಂಟೆಯಿಂದ ಗ್ರಹಣ ವೀಕ್ಷಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 200 ಮಂದಿಗೆ ಅವಕಾಶ ಕಲ್ಪಿಸಲಾಗಿದೆ.</p>.<p>ವಿಜಯನಗರದಲ್ಲಿ ಯಂಗ್ ಇನ್ನೋವೇಟರ್ಸ್ ಎಜುಕೇಷನಲ್ ಸರ್ವಿಸಸ್ ಸಂಸ್ಥೆ ರಾತ್ರಿ 9 ಗಂಟೆಯಿಂದ, ಕೋರಮಂಗಲದಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ಹಾಗೂ ಲಾಲ್ಬಾಗ್ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯ ರಾತ್ರಿ 8.30ರಿಂದ ಹಾಗೂ ರಾಜಾಜಿನಗರದಲ್ಲಿರುವ ಬ್ರೇಕಥ್ರೂ ಸೈನ್ಸ್ ಸೊಸೈಟಿ ಸಂಜೆ 7 ಗಂಟೆಯಿಂದ ಗ್ರಹಣ ವೀಕ್ಷಣೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>