ಅಲ್ಲದೆ ಪತ್ರದಲ್ಲಿ, ‘1996ರಿಂದ 2002ರವರೆಗೆ ಕೆಪಿಸಿಸಿ ಖಜಾಂಚಿಯಾಗಿ, ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದೇನೆ. 1999 ಮತ್ತು 2002ರಲ್ಲಿ ಮಲ್ಲೇಶ್ವರ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದೆ. ಆದರೆ, 2008ರಲ್ಲಿ ಸ್ವಪಕ್ಷೀಯರ ಒಳಸಂಚಿನಿಂದ ಟಿಕೆಟ್ ತಪ್ಪಿತ್ತು. ಕೆಲವು ನಾಯಕರ ಚಿತಾವಣೆಯಿಂದಾಗಿ ಲೋಕಸಭೆ ಚುನಾವಣೆಯಲ್ಲಿ (2009) ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ನಿರಾಕರಿಸಲಾಗಿತ್ತು. ವಿಧಾನಸಭೆಯಿಂದ ವಿಧಾನಪರಿಷತ್ಗೆ 2012ರಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷದ ಮತಗಳು ಕಡಿಮೆ ಇದ್ದರೂ ನಾಲ್ಕನೇ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ನೀಡಲಾಗಿತ್ತು. ಆದರೆ, ಪ್ರಜ್ಞಾವಂತ ಶಾಸಕರು ಕೈಹಿಡಿದ ಕಾರಣ, ಪರಿಷತ್ಗೆ ಆಯ್ಕೆಯಾಗಿ ಸಚಿವನೂ ಆದೆ. 2017ರಲ್ಲಿ ಪರಿಷತ್ ಸಭಾ ನಾಯಕನಾಗಿದ್ದೆ. 2018 ಮತ್ತು 2020ರಲ್ಲಿ ವಿಧಾನ ಪರಿಷತ್ ಟಿಕೆಟ್ ನಿರಾಕರಿಸಲಾಗಿತ್ತು. ಇದೇ ಮೇ ತಿಂಗಳಲ್ಲಿ ಪಕ್ಷದ ರಾಜ್ಯ ನಾಯಕತ್ವ ನನ್ನ ಹೆಸರನ್ನು ವಿಧಾನ ಪರಿಷತ್ಗೆ ಆಯ್ಕೆ ಮಾಡಲು ಶಿಫಾರಸು ಮಾಡಿದ್ದರೂ ಪಿತೂರಿ ನಡೆಸಿ ಕೊನೆಕ್ಷಣದಲ್ಲಿ ಮತ್ತೆ ಟಿಕೆಟ್ ನಿರಾಕರಿಸಲಾಗಿದೆ’ ಎಂದೂ ಉಲ್ಲೇಖಿಸಿದ್ದಾರೆ.