ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಗೀತ ಸಮ್ಮೇಳನ: ಎಂ.ಸೂರ್ಯ ಪ್ರಸಾದ್ ಅಧ್ಯಕ್ಷ

Last Updated 17 ನವೆಂಬರ್ 2021, 2:58 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಗಾಯನ ಸಮಾಜದ 51ನೇ ರಾಷ್ಟ್ರೀಯ ಸಂಗೀತ ಸಮ್ಮೇಳನದ ಅಧ್ಯಕ್ಷರಾಗಿ ಸಂಗೀತ ತಜ್ಞ ಎಂ.ಸೂರ್ಯ ಪ್ರಸಾದ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಡಿಸೆಂಬರ್‌ 5ರಿಂದ 12ರವರೆಗೆ ಸಮ್ಮೇಳನ ನಡೆಯಲಿದ್ದು, ಪ್ರಸಿದ್ಧ ವಿದ್ವಾಂಸರಿಂದ ಸೋದಾಹರಣ ಭಾಷಣಗಳು, ಪ್ರಾತ್ಯಕ್ಷಿಕೆಗಳು, ವಿಚಾರಗೋಷ್ಠಿಗಳು ನಡೆಯಲಿವೆ. ಡಿ.12ರಂದು ಸಮಾರೋಪದಲ್ಲಿ ಎಂ.ಸೂರ್ಯ ಪ್ರಸಾದ್ ಅವರಿಗೆ₹50 ಸಾವಿರ ನಗದು ಒಳಗೊಂಡ ‘ಸಂಗೀತ ಕಲಾರತ್ನ’ ಬಿರುದು ನೀಡಿ, ಸನ್ಮಾನಿಸಲಾಗುತ್ತದೆ.

‘ಅತಿಥಿಗಳಾಗಿ ಸಚಿವರಾದ ಆರ್‌.ಅಶೋಕ, ವಿ.ಸುನೀಲ್ ಕುಮಾರ್, ಸಂಸ್ಕಾರ ಭಾರತಿ ಸಂಘಟನಾ ಕಾರ್ಯದರ್ಶಿ ಪ.ರಾ.ಕೃಷ್ಣಮೂರ್ತಿ, ದಿ ಪ್ರಿಂಟರ್ಸ್‌ ಮೈಸೂರು ಪ್ರೈವೇಟ್‌ ಲಿಮಿಟೆಡ್‌ನ ನಿರ್ದೇಶಕ ಕೆ.ಎನ್.ಶಾಂತಕುಮಾರ್, ಯದುಗಿರಿ ಯತಿರಾಜ ರಾಮಾನುಜ ಜೀಯರ್ ಸ್ವಾಮೀಜಿ ಹಾಗೂ ವೀರೇಶಾನಂದ ಸ್ವಾಮೀಜಿ ಭಾಗವಹಿಸಲಿದ್ದಾರೆ’ ಎಂದುಬೆಂಗಳೂರು ಗಾಯನ ಸಮಾಜದ ಅಧ್ಯಕ್ಷ ಎಂ.ಆರ್.ವಿ.ಪ್ರಸಾದ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT