<p><strong>ಬೆಂಗಳೂರು</strong>: ‘ಬದಲಾಗುತ್ತಿರುವ ಹೊಸ ತಂತ್ರಜ್ಞಾನಗಳ ಬಗ್ಗೆ ಅರಿತು, ಹೊಸ ಆವಿಷ್ಕಾರಗಳಿಗೆ ಅಡಿಪಾಯ ಹಾಕಬೇಕು’ ಎಂದು ಇಂಟರ್ನ್ಯಾಷನಲ್ ಸ್ಟಾರ್ಟ್ಅಪ್ ಫೌಂಡೇಷನ್ (ಐಎಸ್ಎಫ್) ಸಹ ಸಂಸ್ಥಾಪಕ ಮತ್ತು ನಿರ್ದೇಶಕ ಶಿವ ಮಹೇಶ್ ತಂಗುತುರು ಹೇಳಿದರು. </p>.<p>ಮದನಪಲ್ಲಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಸೈನ್ಸ್ (ಎಂಐಟಿಎಸ್) ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಪ್ರಥಮ ವರ್ಷದ ಎಂಬಿಎ, ಎಂಸಿಎ ಮತ್ತು ಎಂ.ಟೆಕ್ ತರಗತಿಗಳು ಬುಧವಾರ ಪ್ರಾರಂಭವಾದವು.</p>.<p>ಎಂಐಟಿಎಸ್ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿದ ಶಿವ ಮಹೇಶ್ ತಂಗುತುರು, ‘ವಿದ್ಯಾರ್ಥಿಗಳು ಉದ್ಯಮಿಗಳಾಗಿ ಹೊರಹೊಮ್ಮಬೇಕು. ಇದಕ್ಕೆ ಕೋರ್ಸ್ಗಿಂತ, ಜ್ಞಾನ ಮತ್ತು ಕೌಶಲ ಮುಖ್ಯವಾಗುತ್ತದೆ. ಇಲ್ಲಿ ಉತ್ತಮ ಶಿಕ್ಷಕರಿದ್ದು, ಅವರ ಮಾರ್ಗದರ್ಶನಲ್ಲಿ ಸಂಶೋಧನೆಗಳನ್ನು ನಡೆಸಬೇಕು’ ಎಂದರು.</p>.<p>ವಿಶ್ವವಿದ್ಯಾಲಯದ ಕುಲಪತಿ ಸಿ. ಯುವರಾಜ್, ‘ವಿಶ್ವವಿದ್ಯಾಲಯದಲ್ಲಿ ಲಭ್ಯವಿರುವ ಪ್ರಯೋಗಾಲಯಗಳು, ಮೂಲಸೌಕರ್ಯ, ಗ್ರಂಥಾಲಯ ಇತ್ಯಾದಿ ಸೌಕರ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳು ಉನ್ನತ ಮಟ್ಟಕ್ಕೆ ಬೆಳೆಯಲು ಹಲವು ಅವಕಾಶಗಳಿವೆ’ ಎಂದರು.</p>.<p>ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ದ್ವಾರಕನಾಥ್, ಕುಲಸಚಿವ ಪ್ರದೀಪ್ ಕುಮಾರ್, ಡೀನ್ ಶ್ರೀಮಂತ ಬಸು, ಎಂಬಿಎ ವಿಭಾಗದ ಮುಖ್ಯಸ್ಥೆ ಭಾನುಶ್ರೀ, ಎಂಸಿಎ ವಿಭಾಗದ ಮುಖ್ಯಸ್ಥ ನವೀನ್ ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬದಲಾಗುತ್ತಿರುವ ಹೊಸ ತಂತ್ರಜ್ಞಾನಗಳ ಬಗ್ಗೆ ಅರಿತು, ಹೊಸ ಆವಿಷ್ಕಾರಗಳಿಗೆ ಅಡಿಪಾಯ ಹಾಕಬೇಕು’ ಎಂದು ಇಂಟರ್ನ್ಯಾಷನಲ್ ಸ್ಟಾರ್ಟ್ಅಪ್ ಫೌಂಡೇಷನ್ (ಐಎಸ್ಎಫ್) ಸಹ ಸಂಸ್ಥಾಪಕ ಮತ್ತು ನಿರ್ದೇಶಕ ಶಿವ ಮಹೇಶ್ ತಂಗುತುರು ಹೇಳಿದರು. </p>.<p>ಮದನಪಲ್ಲಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಸೈನ್ಸ್ (ಎಂಐಟಿಎಸ್) ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಪ್ರಥಮ ವರ್ಷದ ಎಂಬಿಎ, ಎಂಸಿಎ ಮತ್ತು ಎಂ.ಟೆಕ್ ತರಗತಿಗಳು ಬುಧವಾರ ಪ್ರಾರಂಭವಾದವು.</p>.<p>ಎಂಐಟಿಎಸ್ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿದ ಶಿವ ಮಹೇಶ್ ತಂಗುತುರು, ‘ವಿದ್ಯಾರ್ಥಿಗಳು ಉದ್ಯಮಿಗಳಾಗಿ ಹೊರಹೊಮ್ಮಬೇಕು. ಇದಕ್ಕೆ ಕೋರ್ಸ್ಗಿಂತ, ಜ್ಞಾನ ಮತ್ತು ಕೌಶಲ ಮುಖ್ಯವಾಗುತ್ತದೆ. ಇಲ್ಲಿ ಉತ್ತಮ ಶಿಕ್ಷಕರಿದ್ದು, ಅವರ ಮಾರ್ಗದರ್ಶನಲ್ಲಿ ಸಂಶೋಧನೆಗಳನ್ನು ನಡೆಸಬೇಕು’ ಎಂದರು.</p>.<p>ವಿಶ್ವವಿದ್ಯಾಲಯದ ಕುಲಪತಿ ಸಿ. ಯುವರಾಜ್, ‘ವಿಶ್ವವಿದ್ಯಾಲಯದಲ್ಲಿ ಲಭ್ಯವಿರುವ ಪ್ರಯೋಗಾಲಯಗಳು, ಮೂಲಸೌಕರ್ಯ, ಗ್ರಂಥಾಲಯ ಇತ್ಯಾದಿ ಸೌಕರ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳು ಉನ್ನತ ಮಟ್ಟಕ್ಕೆ ಬೆಳೆಯಲು ಹಲವು ಅವಕಾಶಗಳಿವೆ’ ಎಂದರು.</p>.<p>ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ದ್ವಾರಕನಾಥ್, ಕುಲಸಚಿವ ಪ್ರದೀಪ್ ಕುಮಾರ್, ಡೀನ್ ಶ್ರೀಮಂತ ಬಸು, ಎಂಬಿಎ ವಿಭಾಗದ ಮುಖ್ಯಸ್ಥೆ ಭಾನುಶ್ರೀ, ಎಂಸಿಎ ವಿಭಾಗದ ಮುಖ್ಯಸ್ಥ ನವೀನ್ ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>