<p><strong>ಬೆಂಗಳೂರು:</strong> ಸಣ್ಣ ಸಮುದಾಯಗಳು ಒಗ್ಗಟ್ಟಾಗಿ ಹೋರಾಟ ಮಾಡಿದಾಗ ಮಾತ್ರ ಹಕ್ಕು ಮತ್ತು ಸವಲತ್ತು ಪಡೆಯಲು ಸಾಧ್ಯ ಎಂದು ಬೇಲಿ ಮಠದ ಶಿವರುದ್ರ ಸ್ವಾಮೀಜಿ ಹೇಳಿದರು.</p>.<p>ನಗರದಲ್ಲಿ ಶನಿವಾರ ಮೂಲ ಮಾದಿಗ ಮೂಮೆಂಟ್ ಆಯೋಜಿಸಿದ್ದ ಮಾದಾರ ಚೆನ್ನಯ್ಯರವರ ಜಯಂತಿ, ಮತಾಂತರ ಮತ್ತು ಒಳ ಮೀಸಲಾತಿ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.</p>.<p>ಬತ್ತಿ, ಎಣ್ಣೆ, ದೀಪದ ಸ್ತಂಭ ಒಂದಾದಾಗ ಮಾತ್ರ ಬೆಳಕು ಕಾಣಬಹುದು. ಸಮುದಾಯಗಳು ಒಂದೊಂದು ದಿಕ್ಕಿನಲ್ಲಿ ಹೋರಾಟ ನಡೆಸಿದರೆ ಏನು ಮಾಡಲು ಆಗುವುದಿಲ್ಲ. ಮಾದಿಗ ಸಮುದಾಯ ತನ್ನ ಸ್ವಾಭಿಮಾನವನ್ನು ಉಳಿಸಿಕೊಂಡು ತಮ್ಮದೇ ಹೋರಾಟಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು. </p>.<p>ಬಸವಣ್ಣ ಅವರು ತಮ್ಮ ಹಲವಾರು ವಚನಗಳಲ್ಲಿ ಮಾದಾರ ಚೆನ್ನಯ್ಯ ಅವರ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದರು. </p>.<p>ದಲಿತ ಸಂಘರ್ಷ ಸಮಿತಿ ಮುಖಂಡ ಎನ್.ಮೂರ್ತಿ, ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿದರು.</p>.<p>ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಂ.ವಸುಂಧರ, ಶಿರಾ ಕೆ.ಎಸ್.ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಸ್.ಬಿ.ನರಸಿಂಹ ಮೂರ್ತಿ, ಒಳ ಮೀಸಲಾತಿ ಮಾದಿಗರ ಒಕ್ಕೂಟದ ಸಂಚಾಲಕ ಎಚ್.ಎಂ.ಸುಬ್ಬರಾಜ್, ಜೆ.ಸಿ.ಪ್ರಕಾಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಣ್ಣ ಸಮುದಾಯಗಳು ಒಗ್ಗಟ್ಟಾಗಿ ಹೋರಾಟ ಮಾಡಿದಾಗ ಮಾತ್ರ ಹಕ್ಕು ಮತ್ತು ಸವಲತ್ತು ಪಡೆಯಲು ಸಾಧ್ಯ ಎಂದು ಬೇಲಿ ಮಠದ ಶಿವರುದ್ರ ಸ್ವಾಮೀಜಿ ಹೇಳಿದರು.</p>.<p>ನಗರದಲ್ಲಿ ಶನಿವಾರ ಮೂಲ ಮಾದಿಗ ಮೂಮೆಂಟ್ ಆಯೋಜಿಸಿದ್ದ ಮಾದಾರ ಚೆನ್ನಯ್ಯರವರ ಜಯಂತಿ, ಮತಾಂತರ ಮತ್ತು ಒಳ ಮೀಸಲಾತಿ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.</p>.<p>ಬತ್ತಿ, ಎಣ್ಣೆ, ದೀಪದ ಸ್ತಂಭ ಒಂದಾದಾಗ ಮಾತ್ರ ಬೆಳಕು ಕಾಣಬಹುದು. ಸಮುದಾಯಗಳು ಒಂದೊಂದು ದಿಕ್ಕಿನಲ್ಲಿ ಹೋರಾಟ ನಡೆಸಿದರೆ ಏನು ಮಾಡಲು ಆಗುವುದಿಲ್ಲ. ಮಾದಿಗ ಸಮುದಾಯ ತನ್ನ ಸ್ವಾಭಿಮಾನವನ್ನು ಉಳಿಸಿಕೊಂಡು ತಮ್ಮದೇ ಹೋರಾಟಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು. </p>.<p>ಬಸವಣ್ಣ ಅವರು ತಮ್ಮ ಹಲವಾರು ವಚನಗಳಲ್ಲಿ ಮಾದಾರ ಚೆನ್ನಯ್ಯ ಅವರ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದರು. </p>.<p>ದಲಿತ ಸಂಘರ್ಷ ಸಮಿತಿ ಮುಖಂಡ ಎನ್.ಮೂರ್ತಿ, ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿದರು.</p>.<p>ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಂ.ವಸುಂಧರ, ಶಿರಾ ಕೆ.ಎಸ್.ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಸ್.ಬಿ.ನರಸಿಂಹ ಮೂರ್ತಿ, ಒಳ ಮೀಸಲಾತಿ ಮಾದಿಗರ ಒಕ್ಕೂಟದ ಸಂಚಾಲಕ ಎಚ್.ಎಂ.ಸುಬ್ಬರಾಜ್, ಜೆ.ಸಿ.ಪ್ರಕಾಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>