<p><strong>ಬೆಂಗಳೂರು</strong>: ‘ಯಾವುದೇ ಪಕ್ಷಕ್ಕೆ ಸೇರಿದರೂ, ತಾರತಮ್ಯ ಮಾಡದೆ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದು ನಮ್ಮ ಕರ್ತವ್ಯ. ಪಕ್ಷಾತೀತವಾಗಿ ಸಮಸ್ಯೆಗಳನ್ನು ಯಾರೇ ಗಮನಕ್ಕೆ ತಂದರೂ ಬಗೆಹರಿಸಲಾಗುವುದು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.</p>.<p>ಸೊರಬ ಬೆಂಗಳೂರು ನಿವಾಸಿಗಳ ‘ಟೀಮ್ ಸಮ್ಮಿಲನ’ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.</p>.<p>‘ಸೊರಬ ಕ್ಷೇತ್ರದ ಅಭಿವೃದ್ಧಿಗಾಗಿ ಅನೇಕ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ನಮ್ಮ ಕ್ಷೇತ್ರದ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸುವ ಉದ್ದೇಶದಿಂದ ಎಲ್ಲ ಕೆಲಸವನ್ನು ಬದಿಗೊತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇನೆ. ಇದೊಂದು ಸ್ಮರಣೀಯ ಕಾರ್ಯಕ್ರಮ. ಇದನ್ನು ಹೀಗೆಯೇ ಮುಂದುವರಿಸಲಾಗುವುದು’ ಎಂದರು.</p>.<p>‘ನಾನು ಎಷ್ಟೇ ಒಳ್ಳೆಯದನ್ನು ಮಾಡಿದರೂ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಬಿಂಬಿಸುತ್ತಾರೆ. ಇತ್ತೀಚೆಗೆ ಸಿಗಂದೂರು ವಿಚಾರದಲ್ಲೂ ಹಾಗೇ ಆಯಿತು. ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡುವವರಿಗೆ ಮುಂದೆ ಸಿಗಂದೂರು ಚೌಡೇಶ್ವರಿಯೇ ಬುದ್ದಿ ಕಲಿಸುತ್ತಾಳೆ’ ಎಂದರು.</p>.<p>ಕಾರ್ಯಕ್ರಮದಲ್ಲಿ 25 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಲಾ ₹15 ಸಾವಿರ ನಗದು, ಫಲಕ ನೀಡಿ ಗೌರವಿಸಲಾಯಿತು.</p>.<p>ಸೊರಬ ನಿವಾಸಿಗಳ ಟೀಮ್ ಸಮ್ಮೀಲನದ ಮುಖ್ಯಸ್ಥ ಏಕಾಂತಪ್ಪ ಕುಮ್ಮೂರು, ವಕೀಲ ಕೇಶವಮೂರ್ತಿ ಹಾಲಗಳಲೆ, ದತ್ತಾತ್ರೇಯ ಬಿದರಗೆರೆ, ಕಲ್ಯಾಣ ಕುಮಾರ್ ತವನಂದಿ, ಶೇಖರಪ್ಪ ಹರೂರು, ಮುಕುಂದ ಹಿರೇಇಡಗೋಡು, ಗಣೇಶ್ ಹುಲ್ತಿಕೊಪ್ಪ, ಗಣಪತಿ ಹಳೇ ಸೊರಬ, ಪೀತಾಂಬರ ಕೆರೆಕೊಪ್ಪ ಮತ್ತಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಯಾವುದೇ ಪಕ್ಷಕ್ಕೆ ಸೇರಿದರೂ, ತಾರತಮ್ಯ ಮಾಡದೆ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದು ನಮ್ಮ ಕರ್ತವ್ಯ. ಪಕ್ಷಾತೀತವಾಗಿ ಸಮಸ್ಯೆಗಳನ್ನು ಯಾರೇ ಗಮನಕ್ಕೆ ತಂದರೂ ಬಗೆಹರಿಸಲಾಗುವುದು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.</p>.<p>ಸೊರಬ ಬೆಂಗಳೂರು ನಿವಾಸಿಗಳ ‘ಟೀಮ್ ಸಮ್ಮಿಲನ’ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.</p>.<p>‘ಸೊರಬ ಕ್ಷೇತ್ರದ ಅಭಿವೃದ್ಧಿಗಾಗಿ ಅನೇಕ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ನಮ್ಮ ಕ್ಷೇತ್ರದ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸುವ ಉದ್ದೇಶದಿಂದ ಎಲ್ಲ ಕೆಲಸವನ್ನು ಬದಿಗೊತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇನೆ. ಇದೊಂದು ಸ್ಮರಣೀಯ ಕಾರ್ಯಕ್ರಮ. ಇದನ್ನು ಹೀಗೆಯೇ ಮುಂದುವರಿಸಲಾಗುವುದು’ ಎಂದರು.</p>.<p>‘ನಾನು ಎಷ್ಟೇ ಒಳ್ಳೆಯದನ್ನು ಮಾಡಿದರೂ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಬಿಂಬಿಸುತ್ತಾರೆ. ಇತ್ತೀಚೆಗೆ ಸಿಗಂದೂರು ವಿಚಾರದಲ್ಲೂ ಹಾಗೇ ಆಯಿತು. ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡುವವರಿಗೆ ಮುಂದೆ ಸಿಗಂದೂರು ಚೌಡೇಶ್ವರಿಯೇ ಬುದ್ದಿ ಕಲಿಸುತ್ತಾಳೆ’ ಎಂದರು.</p>.<p>ಕಾರ್ಯಕ್ರಮದಲ್ಲಿ 25 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಲಾ ₹15 ಸಾವಿರ ನಗದು, ಫಲಕ ನೀಡಿ ಗೌರವಿಸಲಾಯಿತು.</p>.<p>ಸೊರಬ ನಿವಾಸಿಗಳ ಟೀಮ್ ಸಮ್ಮೀಲನದ ಮುಖ್ಯಸ್ಥ ಏಕಾಂತಪ್ಪ ಕುಮ್ಮೂರು, ವಕೀಲ ಕೇಶವಮೂರ್ತಿ ಹಾಲಗಳಲೆ, ದತ್ತಾತ್ರೇಯ ಬಿದರಗೆರೆ, ಕಲ್ಯಾಣ ಕುಮಾರ್ ತವನಂದಿ, ಶೇಖರಪ್ಪ ಹರೂರು, ಮುಕುಂದ ಹಿರೇಇಡಗೋಡು, ಗಣೇಶ್ ಹುಲ್ತಿಕೊಪ್ಪ, ಗಣಪತಿ ಹಳೇ ಸೊರಬ, ಪೀತಾಂಬರ ಕೆರೆಕೊಪ್ಪ ಮತ್ತಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>