‘ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಕ್ಷೇತ್ರದ ಅಭಿವೃದ್ಧಿಗೆ ಸೀಮಿತವಾಗಿದ್ದಾರೆ. ಸಮುದಾಯದ ಅಭಿವೃದ್ಧಿಗೆ ಗಮನ ನೀಡುತ್ತಿಲ್ಲ. ಕೇಂದ್ರ ಸಚಿವರಾಗಿರುವ ಎ. ನಾರಾಯಣಸ್ವಾಮಿ ಅವರು ಸದಾಶಿವ ಆಯೋಗದ ವರದಿಗೆ ಧ್ವನಿ ಎತ್ತುತ್ತಿಲ್ಲ. ಆದ್ದರಿಂದ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಸಮುದಾಯದ ಅಭಿವೃದ್ಧಿಗೆ ಕೈ ಜೋಡಿಸಬೇಕು’ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಬುಳ್ಳಹಳ್ಳಿ ರಾಜಪ್ಪ ಒತ್ತಾಯಿಸಿದರು.