ಬೆಂಗಳೂರು: ‘ಪರಿಶಿಷ್ಟ ಜಾತಿಯ (ಎಸ್ಸಿ) ಆಂತರಿಕ ಮೀಸಲು ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಅನುಷ್ಠಾನಗೊಳಿಸುವುದಕ್ಕಾಗಿ ಮುಖ್ಯಮಂತ್ರಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಪ್ರಮುಖರು, ಪಕ್ಷದ ವರಿಷ್ಠರು ಹಾಗೂ ಕಾನೂನು ತಜ್ಞರ ಜೊತೆ ಗಂಭೀರ ಚರ್ಚೆ ನಡೆಸುತ್ತಿದ್ದೇನೆ’ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ ಹೇಳಿದರು.