‘ವರದಕ್ಷಿಣೆ ಕಿರುಕುಳ ಸಂಬಂಧ ಮುಂಬೈ ಮೂಲದ ಅಜಯ್ ವಿರುದ್ಧ ಮಡಿವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆಗೆ ಪದೇ ಪದೇ ಗೈರಾಗಿದ್ದರಿಂದ ಅಜಯ್ ವಿರುದ್ಧ ವಾರಂಟ್ ಜಾರಿಗೊಳಿಸಲಾಗಿತ್ತು. ಮುಂಬೈಗೆ ಹೋಗಿ ಆರೋಪಿಯನ್ನು ಬಂಧಿಸಿದ್ದ ಪೊಲೀಸರು, ನಗರಕ್ಕೆ ಬಂದ ಮೇಲೆ ಹಣ ಪಡೆದು ಆತನನ್ನು ಬಿಟ್ಟು ಕಳುಹಿಸಿದ್ದರು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.