‘ಮಡಿವಾಳ ಕೆರೆಯನ್ನು ಸಮುದಾಯ ಮೀಸಲು ಪ್ರದೇಶವಾಗಿ ಪರಿವರ್ತನೆ ಮಾಡಬೇಕು ಎಂದು ಒಂದು ವರ್ಷದ ಹಿಂದೆ ಪ್ರಸ್ತಾವ ಸಲ್ಲಿಸಿದ್ದೇವೆ. ಕೆರೆ ಮಲಿನಗೊಂಡರೆ ಪಕ್ಷಿಗಳು ಇಲ್ಲಿಗೆ ವಲಸೆ ಬರುವುದಿಲ್ಲ. ಅವುಗಳಿಗೆ ಹರಿಯುವ ನೀರು ಇರಬೇಕು, ಆಹಾರ ಸಿಗಬೇಕು. ಆದರೆ ಈಗ ಕೆರೆಯ ನೀರು ವಿಷವಾಗಿ ಪರಿವರ್ತನೆಗೊಳ್ಳುತ್ತಿದೆ. ಅಲ್ಲದೆ ಇತರ ಪ್ರಾಣಿಗಳು ಸಾಯುತ್ತಿವೆ. ಇಂತಹ ಸಂದರ್ಭದಲ್ಲಿ ಪಕ್ಷಿಗಳ ಜೀವಕ್ಕೂ ಅಪಾಯವಿದೆ’ ಎಂದು ಅವರು ವಿವರಿಸಿದರು.