<p><strong>ಬೆಂಗಳೂರು</strong>: ‘ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ಮಡಿವಾಳರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವಿ. ದೀಪಕ್ ಆಗ್ರಹಿಸಿದರು. </p>.<p>ಸಂಘವು ನಗರದಲ್ಲಿ ಭಾನುವಾರ ಹಮ್ಮಿಕೊಂಡ ಸಮಾರಂಭದಲ್ಲಿ ಮಹೇಂದ್ರ ಮುನ್ನೋತ್ ಜೈನ್, ಅಶೋಕ್ ದೊಮ್ಮಲೂರು, ಬಿ. ಶ್ರೀಧರ್, ಟಿ.ಎಂ. ಪ್ರಸಾದ್ ಹಾಗೂ ಮೈಲಾರಿ ಮಡಿವಾಳರ್ ಅವರಿಗೆ ‘ಮಡಿವಾಳ ಮಾಚಿದೇವರ ಪ್ರಶಸ್ತಿ’ ಪ್ರದಾನ ಮಾಡಲಾಯಿತು.</p>.<p>‘ಮಡಿವಾಳ ಜನಾಂಗ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಪ್ರಗತಿ ಹೊಂದಬೇಕಾದರೆ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು. ಈ ಬಗ್ಗೆ ದಶಕಗಳ ಹೋರಾಟದ ನಂತರ 2009–10ರಲ್ಲಿ ಡಾ. ಅನ್ನಪೂರ್ಣ ಅವರ ಅಧ್ಯಕ್ಷತೆಯಲ್ಲಿ ಆಯೋಗ ರಚಿಸಲಾಗಿತ್ತು. ಜನಾಂಗದ ಸ್ಥಿತಿಗತಿಯ ಬಗ್ಗೆ ಕುಲಶಾಸ್ತ್ರೀಯ ಅಧ್ಯಯನ ಮಾಡಿ, ವರದಿ ಸಲ್ಲಿಸಲಾಗಿತ್ತು. ಆದರೆ, ಈ ವರದಿಯನ್ನು ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡದೆ ನನೆಗುದಿಗೆ ಬೀಳುವಂತೆ ಮಾಡಿವೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ದೇಶದ 17 ರಾಜ್ಯಗಳು, 4 ಕೇಂದ್ರಾಡಳಿತ ಪ್ರದೇಶದಲ್ಲಿ ಮಡಿವಾಳ ಜನಾಂಗವು ಪರಿಶಿಷ್ಟ ಜಾತಿಯಲ್ಲಿದೆ. ರಾಜ್ಯದಲ್ಲಿ ನಮ್ಮ ಜನಾಂಗವನ್ನು ಚುನಾವಣೆಗೆ ಮಾತ್ರ ಬಳಸಿಕೊಳ್ಳಲಾಗುತ್ತಿದೆ’ ಎಂದು ಹೇಳಿದರು. </p>.<p>ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅವರು, ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಅವರು, ‘ಈ ವಿಚಾರವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರುತ್ತೇನೆ. ನಮ್ಮ ಸರ್ಕಾರವು ಮಡಿವಾಳ ಜನಾಂಗಕ್ಕೆ ಸ್ಪಂದಿಸಲಿದೆ’ ಎಂದು ಭರವಸೆ ನೀಡಿದರು. </p>.<p>ಚಿತ್ರದುರ್ಗದ ಮಡಿವಾಳ ಮಠದ ಬಸವ ಮಾಚಿದೇವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಇದೇ ವೇಳೆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನೂ ಪ್ರದಾನ ಮಾಡಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ಮಡಿವಾಳರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವಿ. ದೀಪಕ್ ಆಗ್ರಹಿಸಿದರು. </p>.<p>ಸಂಘವು ನಗರದಲ್ಲಿ ಭಾನುವಾರ ಹಮ್ಮಿಕೊಂಡ ಸಮಾರಂಭದಲ್ಲಿ ಮಹೇಂದ್ರ ಮುನ್ನೋತ್ ಜೈನ್, ಅಶೋಕ್ ದೊಮ್ಮಲೂರು, ಬಿ. ಶ್ರೀಧರ್, ಟಿ.ಎಂ. ಪ್ರಸಾದ್ ಹಾಗೂ ಮೈಲಾರಿ ಮಡಿವಾಳರ್ ಅವರಿಗೆ ‘ಮಡಿವಾಳ ಮಾಚಿದೇವರ ಪ್ರಶಸ್ತಿ’ ಪ್ರದಾನ ಮಾಡಲಾಯಿತು.</p>.<p>‘ಮಡಿವಾಳ ಜನಾಂಗ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಪ್ರಗತಿ ಹೊಂದಬೇಕಾದರೆ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು. ಈ ಬಗ್ಗೆ ದಶಕಗಳ ಹೋರಾಟದ ನಂತರ 2009–10ರಲ್ಲಿ ಡಾ. ಅನ್ನಪೂರ್ಣ ಅವರ ಅಧ್ಯಕ್ಷತೆಯಲ್ಲಿ ಆಯೋಗ ರಚಿಸಲಾಗಿತ್ತು. ಜನಾಂಗದ ಸ್ಥಿತಿಗತಿಯ ಬಗ್ಗೆ ಕುಲಶಾಸ್ತ್ರೀಯ ಅಧ್ಯಯನ ಮಾಡಿ, ವರದಿ ಸಲ್ಲಿಸಲಾಗಿತ್ತು. ಆದರೆ, ಈ ವರದಿಯನ್ನು ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡದೆ ನನೆಗುದಿಗೆ ಬೀಳುವಂತೆ ಮಾಡಿವೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ದೇಶದ 17 ರಾಜ್ಯಗಳು, 4 ಕೇಂದ್ರಾಡಳಿತ ಪ್ರದೇಶದಲ್ಲಿ ಮಡಿವಾಳ ಜನಾಂಗವು ಪರಿಶಿಷ್ಟ ಜಾತಿಯಲ್ಲಿದೆ. ರಾಜ್ಯದಲ್ಲಿ ನಮ್ಮ ಜನಾಂಗವನ್ನು ಚುನಾವಣೆಗೆ ಮಾತ್ರ ಬಳಸಿಕೊಳ್ಳಲಾಗುತ್ತಿದೆ’ ಎಂದು ಹೇಳಿದರು. </p>.<p>ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅವರು, ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಅವರು, ‘ಈ ವಿಚಾರವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರುತ್ತೇನೆ. ನಮ್ಮ ಸರ್ಕಾರವು ಮಡಿವಾಳ ಜನಾಂಗಕ್ಕೆ ಸ್ಪಂದಿಸಲಿದೆ’ ಎಂದು ಭರವಸೆ ನೀಡಿದರು. </p>.<p>ಚಿತ್ರದುರ್ಗದ ಮಡಿವಾಳ ಮಠದ ಬಸವ ಮಾಚಿದೇವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಇದೇ ವೇಳೆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನೂ ಪ್ರದಾನ ಮಾಡಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>