ಸಂಘದ ಉಪಾಧ್ಯಕ್ಷ ಬಿ.ಆರ್.ಪ್ರಕಾಶ್, ‘ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಬಗ್ಗೆ ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಎಸ್.ಸಿಗೆ ಸೇರಿಸುವಂತೆಅನ್ನಪೂರ್ಣಮ್ಮ ಸಮಿತಿಯೂ ಶಿಫಾರಸು ಮಾಡಿತ್ತು. ಆದರೂ ಈ ವಿಷಯದಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದೆ’ ಎಂದು ಬೇಸರ ವ್ಯಕ್ತಪಡಿಸಿದರು.