ಸ್ಥಳೀಯ ನಿವಾಸಿ ಹಾಗೂ ರೈನ್ಬೋ ಮಕ್ಕಳ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ. ಸುಮನ್ ಸಿಂಗ್ ಮಾತನಾಡಿ, ‘ಕೆರೆಯ ಪ್ರದೇಶಕ್ಕೆ ವಾಯುವಿಹಾರಕ್ಕೆ ಪ್ರತಿನಿತ್ಯ ಬರುತ್ತೇವೆ. ಆದರೆ, ಇತ್ತೀಚಿನ ದಿನಗಳಲ್ಲಿ ಇಲ್ಲಿನ ವಾತಾವರಣ ಆರೋಗ್ಯ ಪೂಣವಾಗಿಲ್ಲ. ಎಲ್ಲೆಂದರಲ್ಲಿ ಕಸ ಹಾಕಲಾಗಿದೆ. ಬಿಬಿಎಂಪಿ ಕಿಂಚಿತ್ತೂ ನಿರ್ವಹಣೆ ಮಾಡಿಲ್ಲ. ಹೀಗಾಗಿ, ಕೂಡಲೇ ಸುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿ, ವಾಯುವಿಹಾರಿಗಳಿಗೆ ಮತ್ತು ಪರಿಸರ ಪ್ರೇಮಿಗಳಿಗೆ ಅನುಕೂಲ ಕಲ್ಪಿಸಿಕೊಡಬೇಕು’ ಎಂದು ಆಗ್ರಹಿಸಿದರು.