‘ಮಂಜುನಾಥ್, ಅಪರಾಧ ಹಿನ್ನೆಲೆಯುಳ್ಳವ. ಅಪರಾಧ ಪ್ರಕರಣವೊಂದರಲ್ಲಿ ಜೈಲಿಗೆ ಹೋಗಿ ಜಾಮೀನು ಮೇಲೆ ಹೊರಬಂದಿದ್ದ. ತಳ್ಳುಗಾಡಿಯಲ್ಲಿ ಮುಸುಕಿನ ಜೋಳ ಮಾರಲಾರಂಭಿಸಿದ್ದ. ಬೀಗ ಹಾಕಿರುತ್ತಿದ್ದ, ಅಂಗಳದಲ್ಲಿ ಕಸ ಬಿದ್ದಿರುತ್ತಿದ್ದ, ರಂಗೋಲಿ ಹಾಕಿರದ ಮನೆಗಳನ್ನು ಆರೋಪಿ ಗುರುತಿಸುತ್ತಿದ್ದ. ಮನೆಯಲ್ಲಿ ಯಾರೂ ಇಲ್ಲದ್ದನ್ನು ತಿಳಿದುಕೊಂಡು, ಬಾಗಿಲು ಮೀಟಿ ಒಳನುಗ್ಗಿ ಕಳ್ಳತನ ಮಾಡಿಕೊಂಡು ಪರಾರಿಯಾಗುತ್ತಿದ್ದ.’