<p><strong>ಬೆಂಗಳೂರು</strong>: ಮೈದಾನದಲ್ಲಿ ಆಟವಾಡುತ್ತಿದ್ದ ಬಾಲಕರನ್ನು ಬಲವಂತವಾಗಿ ಮರಕ್ಕೆ ಕಟ್ಟಿಹಾಕಿ ಥಳಿಸಿ, ಅವರಿಂದ ಬೀಡಿ ಸೇದಿಸಿದ್ದ ಆರೋಪದಡಿ ಆರು ಮಂದಿಯನ್ನು ಮಹದೇವಪುರ ಪೊಲೀಸರು ಬಂಧಿಸಿದ್ದಾರೆ.</p>.<p>‘ಸ್ಥಳೀಯ ನಿವಾಸಿ ವಿವೇಕ್ (18) ಬಂಧಿತ. ಆತ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ. ಉಳಿದ ಐವರು ಬಾಲಕರು. ಬಾಲನ್ಯಾಯ ಕಾಯ್ದೆಯಡಿ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಬಿ. ನಾರಾಯಣಪುರದ ಶಾಲೆಯ ಮೈದಾನದಲ್ಲಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಇದರ ವಿಡಿಯೊ ಚಿತ್ರೀಕರಿಸಿದ್ದ ಆರೋಪಿಗಳು, ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದರು. ಆ ವಿಡಿಯೊ ಆಧರಿಸಿ ತನಿಖೆ ಮುಂದುವರಿಸಲಾಗಿದೆ’ ಎಂದೂ ತಿಳಿಸಿದರು.</p>.<p class="Subhead"><strong>ಕಣ್ಣೀರು ಹಾಕಿದ್ದ ಮಕ್ಕಳು: ‘ಆರು ಆರೋಪಿಗಳು ಮೈದಾನದಲ್ಲಿ ಆಟವಾಡುತ್ತಿದ್ದರು. ಅದೇ ಸ್ಥಳಕ್ಕೆ ಇಬ್ಬರು ಮಕ್ಕಳು ಸಹ ಆಟವಾಡಲು ಬಂದಿದ್ದರು. ಅವರನ್ನು ತಡೆದಿದ್ದ ಆರೋಪಿಗಳು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು’ ಎಂದೂ ಮೂಲಗಳು ಹೇಳಿವೆ.</strong></p>.<p>‘ಮಕ್ಕಳನ್ನು ಹಿಡಿದುಕೊಂಡಿದ್ದ ಆರೋಪಿಗಳು, ಮೈದಾನದಲ್ಲಿದ್ದ ಮರಕ್ಕೆ ಕಟ್ಟಿ ಹಾಕಿದ್ದರು. ಅವರ ಬಾಯಲ್ಲಿ ಬೀಡಿ ಇರಿಸಿ ಸೇದುವಂತೆ ಒತ್ತಾಯಿಸಿದ್ದರು. ಇದರಿಂದಾಗಿ ಮಕ್ಕಳು ಅಳಲಾರಂಭಿಸಿದ್ದರು. ಕಣ್ಣೀರು ಹಾಕಿದರೂ ಆರೋಪಿಗಳು ಬಿಟ್ಟಿರಲಿಲ್ಲ.’</p>.<p>‘ಮಕ್ಕಳು ಅಳುವ ದೃಶ್ಯವನ್ನು ಆರೋಪಿಗಳು ಚಿತ್ರೀಕರಿಸಿಕೊಂಡಿದ್ದರು. ಆ ವಿಡಿಯೊ ಎಲ್ಲೆಡೆ ಹರಿದಾಡಿತ್ತು’ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮೈದಾನದಲ್ಲಿ ಆಟವಾಡುತ್ತಿದ್ದ ಬಾಲಕರನ್ನು ಬಲವಂತವಾಗಿ ಮರಕ್ಕೆ ಕಟ್ಟಿಹಾಕಿ ಥಳಿಸಿ, ಅವರಿಂದ ಬೀಡಿ ಸೇದಿಸಿದ್ದ ಆರೋಪದಡಿ ಆರು ಮಂದಿಯನ್ನು ಮಹದೇವಪುರ ಪೊಲೀಸರು ಬಂಧಿಸಿದ್ದಾರೆ.</p>.<p>‘ಸ್ಥಳೀಯ ನಿವಾಸಿ ವಿವೇಕ್ (18) ಬಂಧಿತ. ಆತ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ. ಉಳಿದ ಐವರು ಬಾಲಕರು. ಬಾಲನ್ಯಾಯ ಕಾಯ್ದೆಯಡಿ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಬಿ. ನಾರಾಯಣಪುರದ ಶಾಲೆಯ ಮೈದಾನದಲ್ಲಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಇದರ ವಿಡಿಯೊ ಚಿತ್ರೀಕರಿಸಿದ್ದ ಆರೋಪಿಗಳು, ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದರು. ಆ ವಿಡಿಯೊ ಆಧರಿಸಿ ತನಿಖೆ ಮುಂದುವರಿಸಲಾಗಿದೆ’ ಎಂದೂ ತಿಳಿಸಿದರು.</p>.<p class="Subhead"><strong>ಕಣ್ಣೀರು ಹಾಕಿದ್ದ ಮಕ್ಕಳು: ‘ಆರು ಆರೋಪಿಗಳು ಮೈದಾನದಲ್ಲಿ ಆಟವಾಡುತ್ತಿದ್ದರು. ಅದೇ ಸ್ಥಳಕ್ಕೆ ಇಬ್ಬರು ಮಕ್ಕಳು ಸಹ ಆಟವಾಡಲು ಬಂದಿದ್ದರು. ಅವರನ್ನು ತಡೆದಿದ್ದ ಆರೋಪಿಗಳು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು’ ಎಂದೂ ಮೂಲಗಳು ಹೇಳಿವೆ.</strong></p>.<p>‘ಮಕ್ಕಳನ್ನು ಹಿಡಿದುಕೊಂಡಿದ್ದ ಆರೋಪಿಗಳು, ಮೈದಾನದಲ್ಲಿದ್ದ ಮರಕ್ಕೆ ಕಟ್ಟಿ ಹಾಕಿದ್ದರು. ಅವರ ಬಾಯಲ್ಲಿ ಬೀಡಿ ಇರಿಸಿ ಸೇದುವಂತೆ ಒತ್ತಾಯಿಸಿದ್ದರು. ಇದರಿಂದಾಗಿ ಮಕ್ಕಳು ಅಳಲಾರಂಭಿಸಿದ್ದರು. ಕಣ್ಣೀರು ಹಾಕಿದರೂ ಆರೋಪಿಗಳು ಬಿಟ್ಟಿರಲಿಲ್ಲ.’</p>.<p>‘ಮಕ್ಕಳು ಅಳುವ ದೃಶ್ಯವನ್ನು ಆರೋಪಿಗಳು ಚಿತ್ರೀಕರಿಸಿಕೊಂಡಿದ್ದರು. ಆ ವಿಡಿಯೊ ಎಲ್ಲೆಡೆ ಹರಿದಾಡಿತ್ತು’ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>