ಬೆಂಗಳೂರು: ಮಹದೇವಪುರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಆರೋಪದಡಿ ಚೇತನ್ಕುಮಾರ್ (23) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
‘ರಾಜಾಜಿನಗರ ಭೀಮಶಕ್ತಿನಗರದ ನಿವಾಸಿ ಎಸ್. ಚೇತನ್ಕುಮಾರ್ (23), 2021ರ ಅಕ್ಟೋಬರ್ 5ರಂದು ಕೃತ್ಯ ಎಸಗಿ ಪರಾರಿಯಾಗಿದ್ದ. ಸೂಕ್ತ ಪುರಾವೆಗಳನ್ನು ಸಂಗ್ರಹಿಸಿ ಈತನನ್ನು ಬಂಧಿಸಲಾಗಿದೆ. ₹ 8 ಲಕ್ಷ ಮೌಲ್ಯದ 164 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಆರೋಪಿ ಚೇತನ್, ಸಹಚರರ ಜೊತೆ ಸೇರಿ ಕಳ್ಳತನ ಮಾಡುತ್ತಿದ್ದ. ಟಿನ್ ಫ್ಯಾಕ್ಟರಿ ಬಳಿ ಬಸ್ ಪ್ರಯಾಣಿಕರೊಬ್ಬರನ್ನು ಸುಲಿಗೆ ಮಾಡಿದ್ದ ಮಾಹಿತಿ ಇದೆ’ ಎಂದೂ ತಿಳಿಸಿದರು.