ಈಗ ₹78.32 ಕೋಟಿ ಬಿಡುಗಡೆ ಮಾಡಿರುವ ಸರ್ಕಾರ, ಟೆಂಡರ್ ಆಹ್ವಾನಿಸಿಯೇ ಕಾಮಗಾರಿ ನಿರ್ವಹಿಸಬೇಕು ಎಂಬ ಷರತ್ತು ವಿಧಿಸಿದೆ. ₹10 ಕೋಟಿಗೂ ಕಡಿಮೆ ಇಲ್ಲದಂತೆ ಪ್ಯಾಕೇಜ್ ರೂಪಿಸಿ ಮುಂದಿನ ಎರಡು ವರ್ಷಗಳಲ್ಲಿ ಹಂತ–ಹಂತವಾಗಿ ಕಾಮಗಾರಿ ನಿರ್ವಹಿಸಬೇಕು. ಕ್ರಿಯಾಯೋಜನೆ ಪಟ್ಟಿಯಲ್ಲಿ ಇಲ್ಲದ ಕಾಮಗಾರಿಗಳನ್ನು ಅನಿವಾರ್ಯವಾಗಿ ಪ್ಯಾಕೇಜ್ನಲ್ಲಿ ಸೇರ್ಪಡೆ ಮಾಡಬೇಕಿದ್ದರೆ ಮುಖ್ಯ ಆಯುಕ್ತರ ಶಿಫಾರಸಿನೊಂದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಮುಖ್ಯಮಂತ್ರಿ ಅವರಿಂದ ಅನುಮೋದನೆ ಪಡೆಯಬೇಕು ಎಂದು ಆದೇಶದಲ್ಲಿ ತಿಳಿಸಿದೆ.