‘ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಪೌರ ಕಾರ್ಮಿಕರು ಮನೆ, ಮನೆಗೆ ತೆರಳಿ ಕಸ ಸಂಗ್ರಹಿಸುತ್ತಿದ್ದಾರೆ. ನೈಸ್ ರಸ್ತೆಯ ಬಳಿ ಅನಧಿಕೃತವಾಗಿ ಕಸವನ್ನು ತಂದು ಸುರಿಯಲಾಗುತ್ತಿದೆ. ಅದರಲ್ಲಿ ಕುರಿ, ಕೋಳಿ ಮಾಂಸದ ತ್ಯಾಜ್ಯವೂ ಇರುತ್ತದೆ. ಮಿಟಗಾನಹಳ್ಳಿಯಲ್ಲಿ ವಿಲೇವಾರಿ ಮಾಡಲು ಹೋದರೆ, ವಾಣಿಜ್ಯ ತ್ಯಾಜ್ಯ ತಂದಿದ್ದೀರಿ ಎಂದು ಆಕ್ಷೇಪ ವ್ಯಕ್ತಪಡಿಸುತ್ತಾರೆ’ ಎಂದು ಬಿಬಿಎಂಪಿ ಕೆಂಗೇರಿ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪೂರ್ಣಿಮಾ ‘ಪ್ರಜಾವಾಣಿ’ಗೆ ತಿಳಿಸಿದರು.