ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾಲಕ್ಷ್ಮಿ ಲೇಔಟ್: 250 ಹಾಸಿಗೆಗಳ ಆರೈಕೆ ಕೇಂದ್ರ

Last Updated 13 ಜುಲೈ 2020, 20:46 IST
ಅಕ್ಷರ ಗಾತ್ರ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಪ್ರಿಸ್ಟಿನ್‌ ಆಸ್ಪತ್ರೆಯ ಸಹಯೋಗದಲ್ಲಿ 250 ಹಾಸಿಗೆಗಳ ಕೋವಿಡ್‌ ಆರೈಕೆ ಕೇಂದ್ರ ಮತ್ತು ರಾಸಾಯನಿಕ ಸಿಂಪಡಣಾ ವಾಹನಗಳಿಗೆ ಸೋಮವಾರ ಚಾಲನೆ ನೀಡಲಾಯಿತು.

ಶಿಕ್ಷಣ ಸಚಿವ ಎಸ್‌.ಸುರೇಶ್ ಕುಮಾರ್ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಗೋಪಾಲಯ್ಯ ಉದ್ಘಾಟಿಸಿದರು.

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ವ್ಯಾಪ್ತಿಯಲ್ಲಿ ಕೊರೊನಾ ಪಾಸಿಟಿವ್ ಮತ್ತು ಇತರ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡಲು ಅಗತ್ಯವಾದ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಜನ ಭಯಗೊಳ್ಳಬಾರದು ಎಂದು ಗೋಪಾಲಯ್ಯ ಕೇಳಿಕೊಂಡರು.

ಆಸ್ಪತ್ರೆಯ ಮುಖ್ಯ ವೈದ್ಯ ಡಾ.ಎಚ್.ಎಂ ಪ್ರಸನ್ನ ಮಾತನಾಡಿ, ‘ಸರ್ಕಾರ ಮತ್ತು ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಕೈಜೋಡಿಸಿ ಈ ರೋಗದಿಂದ ಬಳಲುತ್ತಿರುವವರಿಗೆ ಸಮರ್ಪಕ ಚಿಕಿತ್ಸೆ ನೀಡಲು ಅಗತ್ಯವಾದ ಎಲ್ಲಾ ನಿಯಮಗಳನ್ನು ಕೈಗೊಳ್ಳಲಾಗಿದೆ‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT