‘ಆರೋಗ್ಯಪೂರ್ಣ ಕರ್ನಾಟಕ ನಿರ್ಮಾಣ ಹಾಗೂ ರಾಜ್ಯದಲ್ಲಿ ಕೋವಿಡ್ ಅನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಉದ್ದೇಶದಿಂದ ರಾಷ್ಟ್ರೋತ್ಥಾನ ಪರಿಷತ್, ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಐಸಿಯು ಘಟಕಗಳನ್ನು ತೆರೆಯಲು ಅನುವಾಗುತ್ತಿದೆ. ಕಳೆದ ನಾಲ್ಕು ತಿಂಗಳಿಂದ ಹಲವು ಕಾರ್ಪೊರೇಟ್ ಕಂಪನಿಗಳು ಹಾಗೂ ನಾಸ್ಕಾಂ ಫೌಂಡೇಷನ್ಗಳ ಸಹಯೋಗದಲ್ಲಿ ಒಟ್ಟು 5 ಆಸ್ಪತ್ರೆಗಳಿಗೆ ಅಗತ್ಯ ವೈದ್ಯಕೀಯ ಉಪಕರಣಗಳನ್ನೂ ಒದಗಿಸಲಾಗಿದೆ’ ಎಂದು ರಾಷ್ಟ್ರೋತ್ಥಾನ ಪರಿಷತ್ನ ಉಪಾಧ್ಯಕ್ಷ ಎ.ಆರ್.ದ್ವಾರಕಾನಾಥ್ ತಿಳಿಸಿದರು.