<p><strong>ಬೆಂಗಳೂರು:</strong> ‘ಸಂವಿಧಾನದಡಿ ಮಾಧ್ಯಮಕ್ಕೆ ಪ್ರತ್ಯೇಕ ವಾಕ್ ಸ್ವಾತಂತ್ರ್ಯ ಅಗತ್ಯವಿದೆ’ ಎಂದು ಪತ್ರಕರ್ತೆ ಮಾಯಾ ಶರ್ಮ ತಿಳಿಸಿದರು. </p>.<p>ಮಹಾರಾಣಿ ಲಕ್ಷ್ಮೀ ಅಮ್ಮಣಿ ಕಾಲೇಜು ನಗರದಲ್ಲಿ ಮಂಗಳವಾರ ಹಮ್ಮಿಕೊಂಡ ಸಂವಾದ ಕಾರ್ಯಕ್ರಮದಲ್ಲಿ ‘ಸಂವಿಧಾನ ಮತ್ತು ಆಧುನಿಕ ಭಾರತದಲ್ಲಿ ಯುವಕರು’ ಎಂಬ ವಿಷಯದ ಮೇಲೆ ಮಾತನಾಡಿದರು. </p>.<p>‘ಸ್ವತಂತ್ರವಾಗಿ ಅಭಿಪ್ರಾಯವನ್ನು ವ್ಯಕ್ತಪಡಿಸಲು ಪತ್ರಕರ್ತರಿಗೆ ವಾಕ್ ಸ್ವಾತಂತ್ರ್ಯ ಅಗತ್ಯ. ಹೊಸದಾಗಿ ಮಾಧ್ಯಮ ಕ್ಷೇತ್ರಕ್ಕೆ ಬರುವವರು ಸಂವಿಧಾನ ಮತ್ತು ವ್ಯವಸ್ಥೆಯ ಬಗ್ಗೆ ಸಾಕಷ್ಟು ಜ್ಞಾನ ಹೊಂದಿರಬೇಕು’ ಎಂದು ಹೇಳಿದರು. </p>.<p>ವಕೀಲ ಎನ್.ಹರೀಶ್, ‘ರಾಜಕಾರಣಿಗಳು ವಿಧಾನಸಭೆಯಲ್ಲಿ ಮಾತನಾಡದೆ, ಪ್ರಚಾರಕ್ಕಾಗಿ ಮಾಧ್ಯಮಗಳ ಮುಂದೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೆ ವಿಧಾನಸಭೆಯಲ್ಲಿ ಜನಪ್ರತಿನಿಧಿಗಳು ಧ್ವನಿಯಾಗಬೇಕು’ ಎಂದು ತಿಳಿಸಿದರು. </p>.<p>ವಿಧಿ ಸಂಸ್ಥೆಯ ಅಲೋಕ್ ಪ್ರಸನ್ನ, ‘ವಾಕ್ ಸ್ವಾತಂತ್ರ್ಯ, ರಾಷ್ಟ್ರೀಯ ಭದ್ರತಾ ಕಾನೂನು ಸೇರಿ ವಿವಿಧ ಕಾನೂನುಗಳಿಗೆ ಸಂವಿಧಾನದಲ್ಲಿ ಒಂದು ಮಿತಿ ಇರಬೇಕಾಗುತ್ತದೆ. ಸಂವಿಧಾನದ ಮೂಲಭೂತ ಹಕ್ಕುಗಳನ್ನು ಸಂರಕ್ಷಣೆ ಮಾಡುವುದು ಕೇವಲ ಹೈಕೋರ್ಟ್, ಸುಪ್ರೀಂ ಕೋರ್ಟ್ನ ಕಾರ್ಯವಲ್ಲ. ಈ ವಿಷಯದಲ್ಲಿ ಸರ್ಕಾರದ ಜವಾಬ್ದಾರಿಯೂ ಇದೆ’ ಎಂದು ಹೇಳಿದರು</p>.<p>ಕಾಲೇಜಿನ ಪ್ರಾಂಶುಪಾಲೆ ನಾಗಲಕ್ಷ್ಮೀ, ಪ್ರತಿಕೋದ್ಯಮ ವಿಭಾಗದ ಮುಖ್ಯಸ್ಥೆ ಮಂಜುಳಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಂವಿಧಾನದಡಿ ಮಾಧ್ಯಮಕ್ಕೆ ಪ್ರತ್ಯೇಕ ವಾಕ್ ಸ್ವಾತಂತ್ರ್ಯ ಅಗತ್ಯವಿದೆ’ ಎಂದು ಪತ್ರಕರ್ತೆ ಮಾಯಾ ಶರ್ಮ ತಿಳಿಸಿದರು. </p>.<p>ಮಹಾರಾಣಿ ಲಕ್ಷ್ಮೀ ಅಮ್ಮಣಿ ಕಾಲೇಜು ನಗರದಲ್ಲಿ ಮಂಗಳವಾರ ಹಮ್ಮಿಕೊಂಡ ಸಂವಾದ ಕಾರ್ಯಕ್ರಮದಲ್ಲಿ ‘ಸಂವಿಧಾನ ಮತ್ತು ಆಧುನಿಕ ಭಾರತದಲ್ಲಿ ಯುವಕರು’ ಎಂಬ ವಿಷಯದ ಮೇಲೆ ಮಾತನಾಡಿದರು. </p>.<p>‘ಸ್ವತಂತ್ರವಾಗಿ ಅಭಿಪ್ರಾಯವನ್ನು ವ್ಯಕ್ತಪಡಿಸಲು ಪತ್ರಕರ್ತರಿಗೆ ವಾಕ್ ಸ್ವಾತಂತ್ರ್ಯ ಅಗತ್ಯ. ಹೊಸದಾಗಿ ಮಾಧ್ಯಮ ಕ್ಷೇತ್ರಕ್ಕೆ ಬರುವವರು ಸಂವಿಧಾನ ಮತ್ತು ವ್ಯವಸ್ಥೆಯ ಬಗ್ಗೆ ಸಾಕಷ್ಟು ಜ್ಞಾನ ಹೊಂದಿರಬೇಕು’ ಎಂದು ಹೇಳಿದರು. </p>.<p>ವಕೀಲ ಎನ್.ಹರೀಶ್, ‘ರಾಜಕಾರಣಿಗಳು ವಿಧಾನಸಭೆಯಲ್ಲಿ ಮಾತನಾಡದೆ, ಪ್ರಚಾರಕ್ಕಾಗಿ ಮಾಧ್ಯಮಗಳ ಮುಂದೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೆ ವಿಧಾನಸಭೆಯಲ್ಲಿ ಜನಪ್ರತಿನಿಧಿಗಳು ಧ್ವನಿಯಾಗಬೇಕು’ ಎಂದು ತಿಳಿಸಿದರು. </p>.<p>ವಿಧಿ ಸಂಸ್ಥೆಯ ಅಲೋಕ್ ಪ್ರಸನ್ನ, ‘ವಾಕ್ ಸ್ವಾತಂತ್ರ್ಯ, ರಾಷ್ಟ್ರೀಯ ಭದ್ರತಾ ಕಾನೂನು ಸೇರಿ ವಿವಿಧ ಕಾನೂನುಗಳಿಗೆ ಸಂವಿಧಾನದಲ್ಲಿ ಒಂದು ಮಿತಿ ಇರಬೇಕಾಗುತ್ತದೆ. ಸಂವಿಧಾನದ ಮೂಲಭೂತ ಹಕ್ಕುಗಳನ್ನು ಸಂರಕ್ಷಣೆ ಮಾಡುವುದು ಕೇವಲ ಹೈಕೋರ್ಟ್, ಸುಪ್ರೀಂ ಕೋರ್ಟ್ನ ಕಾರ್ಯವಲ್ಲ. ಈ ವಿಷಯದಲ್ಲಿ ಸರ್ಕಾರದ ಜವಾಬ್ದಾರಿಯೂ ಇದೆ’ ಎಂದು ಹೇಳಿದರು</p>.<p>ಕಾಲೇಜಿನ ಪ್ರಾಂಶುಪಾಲೆ ನಾಗಲಕ್ಷ್ಮೀ, ಪ್ರತಿಕೋದ್ಯಮ ವಿಭಾಗದ ಮುಖ್ಯಸ್ಥೆ ಮಂಜುಳಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>