<p><strong>ಬೆಂಗಳೂರು</strong>: ಜನಮುಖಿ ಶೋಷಿತರ ಪರವಾದ ವೇದಿಕೆಯು ಇದೇ 30ರಂದು ಬೆಳಿಗ್ಗೆ 10.30ಕ್ಕೆ ಸರ್ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಮಹಾತ್ಮ ಗಾಂಧೀಜಿ ಅವರ ‘ನನ್ನ ಸತ್ಯಾನ್ವೇಷಣೆ’ ಕೃತಿಯ ಶತಮಾನೋತ್ಸವ ಹಾಗೂ ಹುತಾತ್ಮ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ.</p>.<p>ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಕೆ. ನಾರಾಯಣ ಸ್ವಾಮಿ, ‘ಸಾಮಾಜಿಕ ಜಾಲತಾಣದಲ್ಲಿ ಗಾಂಧೀಜಿ ಅವರ ಬಗ್ಗೆ ನಕಾರಾತ್ಮಕ ಅಂಶಗಳನ್ನು ಹರಡಲಾಗುತ್ತಿದೆ. ಅವರ ಬಗ್ಗೆ ಉಂಟು ಮಾಡುತ್ತಿರುವ ವಿರೋಧ ಭಾವನೆ ಹೋಗಲಾಡಿಸಿ, ಯುವಜನರಲ್ಲಿ ಗಾಂಧಿಪ್ರಜ್ಞೆ ಜಾಗೃತಗೊಳಿಸುವುದು ಕಾರ್ಯಕ್ರಮದ ಉದ್ದೇಶ’ ಎಂದು ತಿಳಿಸಿದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಸಚಿವರಾದ ಎಚ್.ಸಿ. ಮಹದೇವಪ್ಪ, ಸಂತೋಷ್ ಲಾಡ್, ಮುಖ್ಯ ಸಚೇತಕ ಸಲೀಂ ಅಹ್ಮದ್, ಮಾಜಿ ಶಾಸಕ ಜಾನ್ ರಿಚರ್ಡ್ ಲೋಬೋ ಭಾಗವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದರು. </p>.<p>ವೇದಿಕೆಯ ಪ್ರಧಾನ ಕಾರ್ಯದರ್ಶಿ ಎಂ. ರಘುನಂದನ, ಖಜಾಂಚಿ ಪಿ.ಬಿ. ಜಯಕೃಷ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜನಮುಖಿ ಶೋಷಿತರ ಪರವಾದ ವೇದಿಕೆಯು ಇದೇ 30ರಂದು ಬೆಳಿಗ್ಗೆ 10.30ಕ್ಕೆ ಸರ್ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಮಹಾತ್ಮ ಗಾಂಧೀಜಿ ಅವರ ‘ನನ್ನ ಸತ್ಯಾನ್ವೇಷಣೆ’ ಕೃತಿಯ ಶತಮಾನೋತ್ಸವ ಹಾಗೂ ಹುತಾತ್ಮ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ.</p>.<p>ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಕೆ. ನಾರಾಯಣ ಸ್ವಾಮಿ, ‘ಸಾಮಾಜಿಕ ಜಾಲತಾಣದಲ್ಲಿ ಗಾಂಧೀಜಿ ಅವರ ಬಗ್ಗೆ ನಕಾರಾತ್ಮಕ ಅಂಶಗಳನ್ನು ಹರಡಲಾಗುತ್ತಿದೆ. ಅವರ ಬಗ್ಗೆ ಉಂಟು ಮಾಡುತ್ತಿರುವ ವಿರೋಧ ಭಾವನೆ ಹೋಗಲಾಡಿಸಿ, ಯುವಜನರಲ್ಲಿ ಗಾಂಧಿಪ್ರಜ್ಞೆ ಜಾಗೃತಗೊಳಿಸುವುದು ಕಾರ್ಯಕ್ರಮದ ಉದ್ದೇಶ’ ಎಂದು ತಿಳಿಸಿದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಸಚಿವರಾದ ಎಚ್.ಸಿ. ಮಹದೇವಪ್ಪ, ಸಂತೋಷ್ ಲಾಡ್, ಮುಖ್ಯ ಸಚೇತಕ ಸಲೀಂ ಅಹ್ಮದ್, ಮಾಜಿ ಶಾಸಕ ಜಾನ್ ರಿಚರ್ಡ್ ಲೋಬೋ ಭಾಗವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದರು. </p>.<p>ವೇದಿಕೆಯ ಪ್ರಧಾನ ಕಾರ್ಯದರ್ಶಿ ಎಂ. ರಘುನಂದನ, ಖಜಾಂಚಿ ಪಿ.ಬಿ. ಜಯಕೃಷ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>