ಇದಕ್ಕೂ ಮೊದಲು ಜೈನ ಸಮುದಾಯದವರು ವಿಶ್ವ ಶಾಂತಿ ಸಾರಲು ಪುರಭವನ ವೃತ್ತದಿಂದ ಜಾಥಾ ನಡೆಸಿದರು. ಸಮುದಾಯದ ಯುವತಿಯರು, ಮಹಿಳೆಯರು ಹಾಗೂ ಯುವಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಕಾಲ್ನಡಿಗೆ ವೇಳೆ ಭಗವಾನ್ ಮಹಾವೀರರ ಸಂದೇಶಗಳನ್ನು ಸಾರಲಾಯಿತು. ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ವೇಷಧಾರಿಗಳು ಸಾಮಾಜಿಕ ಜಾಲತಾಣಗಳು, ಕುಡಿಯುವ ನೀರಿನ ಬಳಕೆಯ ಬಗ್ಗೆ ಜಾಗೃತಿ ಮೂಡಿಸಿದರು. ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಕಣ್ಮನ ಸೆಳೆದವು.