<p class="rtejustify"><strong>ಬೆಂಗಳೂರು:</strong> ಅಧಿಕ ಬಡ್ಡಿ ಆಮಿಷವೊಡ್ಡಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ವಂಚಿಸಿರುವ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಧಾನಸೌಧ ಠಾಣೆ ಪೊಲೀಸರು, ‘ಮೈಲಾರಿ ಅಗ್ರೋ ಪ್ರೊಡಕ್ಟ್’ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಮಹೇಶ್ (42) ಅವರನ್ನು ಬಂಧಿಸಿದ್ದಾರೆ.</p>.<p class="rtejustify">ಹಣ ಹೂಡಿಕೆ ಮಾಡಿ ವಂಚನೆಗೀಡಾಗಿದ್ದ ಜೆ.ಪಿ. ನಗರದ ಮಹೇಶ್ ಎಂಬುವರು ದೂರು ನೀಡಿದ್ದರು. ಅದರನ್ವಯ ಭರತ್, ಮಹೇಶ್, ಪ್ರಕಾಶ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು.</p>.<p class="rtejustify">‘ಆರೋಪಿ ಭರತ್ ತೀರಿಕೊಂಡಿದ್ದಾರೆ. ಇನ್ನೊಬ್ಬ ಆರೋಪಿ ಪ್ರಕಾಶ್ ಪಾತ್ರ ಪ್ರಕರಣದಲ್ಲಿ ಕಂಡುಬಂದಿಲ್ಲ. ತಾವೇ ಕಂಪನಿ ಸೃಷ್ಟಿಸಿಕೊಂಡಿದ್ದ ಆರೋಪಿ ಮಹೇಶ್, ಇತರರನ್ನು ನಿರ್ದೇಶಕರನ್ನಾಗಿ ಮಾಡಿಕೊಂಡಿದ್ದರು. ಆದರೆ, ಕಂಪನಿ ಬಗ್ಗೆ ನಿರ್ದೇಶಕರಿಗೆ ಯಾವುದೇ ಮಾಹಿತಿಯನ್ನು ಮಹೇಶ್ ತಿಳಿಸುತ್ತಿರಲಿಲ್ಲ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p class="rtejustify">‘ವಂಚನೆಗೆ ಸಂಬಂಧಪಟ್ಟ ದಾಖಲೆಗಳನ್ನು ಸಂಗ್ರಹಿಸಿ ಪೀಣ್ಯ ನಿವಾಸಿ ಮಹೇಶ್ ಅವರನ್ನು ಬಂಧಿಸಲಾಗಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲಾಗಿದೆ’ ಎಂದೂ ತಿಳಿಸಿವೆ.</p>.<p class="rtejustify">₹ 2.50 ಕೋಟಿ ವಂಚನೆ ದಾಖಲೆ: ‘₹ 10 ಸಾವಿರ, ₹ 25 ಸಾವಿರ, ₹ 50 ಸಾವಿರ ಹಾಗೂ ₹ 1 ಲಕ್ಷ ಮೊತ್ತದ ಹೂಡಿಕೆ ಯೋಜನೆಗಳನ್ನು ಕಂಪನಿಯಿಂದ ರೂಪಿಸಲಾಗಿತ್ತು. ಬೆಂಗಳೂರು, ತುಮಕೂರು, ಮೈಸೂರು ಹಾಗೂ ರಾಜ್ಯದ ಹಲವು ಜಿಲ್ಲೆಗಳ ಜನ ಹಣ ಹೂಡಿಕೆ ಮಾಡಿರುವ ಮಾಹಿತಿ ಇದೆ. ಸುಮಾರು ₹ 2.50 ಕೋಟಿಯಷ್ಟು ವಂಚನೆಯಾಗಿರುವುದಕ್ಕೆ ಸದ್ಯ ದಾಖಲೆ ಸಿಕ್ಕಿದೆ’ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="rtejustify"><strong>ಬೆಂಗಳೂರು:</strong> ಅಧಿಕ ಬಡ್ಡಿ ಆಮಿಷವೊಡ್ಡಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ವಂಚಿಸಿರುವ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಧಾನಸೌಧ ಠಾಣೆ ಪೊಲೀಸರು, ‘ಮೈಲಾರಿ ಅಗ್ರೋ ಪ್ರೊಡಕ್ಟ್’ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಮಹೇಶ್ (42) ಅವರನ್ನು ಬಂಧಿಸಿದ್ದಾರೆ.</p>.<p class="rtejustify">ಹಣ ಹೂಡಿಕೆ ಮಾಡಿ ವಂಚನೆಗೀಡಾಗಿದ್ದ ಜೆ.ಪಿ. ನಗರದ ಮಹೇಶ್ ಎಂಬುವರು ದೂರು ನೀಡಿದ್ದರು. ಅದರನ್ವಯ ಭರತ್, ಮಹೇಶ್, ಪ್ರಕಾಶ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು.</p>.<p class="rtejustify">‘ಆರೋಪಿ ಭರತ್ ತೀರಿಕೊಂಡಿದ್ದಾರೆ. ಇನ್ನೊಬ್ಬ ಆರೋಪಿ ಪ್ರಕಾಶ್ ಪಾತ್ರ ಪ್ರಕರಣದಲ್ಲಿ ಕಂಡುಬಂದಿಲ್ಲ. ತಾವೇ ಕಂಪನಿ ಸೃಷ್ಟಿಸಿಕೊಂಡಿದ್ದ ಆರೋಪಿ ಮಹೇಶ್, ಇತರರನ್ನು ನಿರ್ದೇಶಕರನ್ನಾಗಿ ಮಾಡಿಕೊಂಡಿದ್ದರು. ಆದರೆ, ಕಂಪನಿ ಬಗ್ಗೆ ನಿರ್ದೇಶಕರಿಗೆ ಯಾವುದೇ ಮಾಹಿತಿಯನ್ನು ಮಹೇಶ್ ತಿಳಿಸುತ್ತಿರಲಿಲ್ಲ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p class="rtejustify">‘ವಂಚನೆಗೆ ಸಂಬಂಧಪಟ್ಟ ದಾಖಲೆಗಳನ್ನು ಸಂಗ್ರಹಿಸಿ ಪೀಣ್ಯ ನಿವಾಸಿ ಮಹೇಶ್ ಅವರನ್ನು ಬಂಧಿಸಲಾಗಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲಾಗಿದೆ’ ಎಂದೂ ತಿಳಿಸಿವೆ.</p>.<p class="rtejustify">₹ 2.50 ಕೋಟಿ ವಂಚನೆ ದಾಖಲೆ: ‘₹ 10 ಸಾವಿರ, ₹ 25 ಸಾವಿರ, ₹ 50 ಸಾವಿರ ಹಾಗೂ ₹ 1 ಲಕ್ಷ ಮೊತ್ತದ ಹೂಡಿಕೆ ಯೋಜನೆಗಳನ್ನು ಕಂಪನಿಯಿಂದ ರೂಪಿಸಲಾಗಿತ್ತು. ಬೆಂಗಳೂರು, ತುಮಕೂರು, ಮೈಸೂರು ಹಾಗೂ ರಾಜ್ಯದ ಹಲವು ಜಿಲ್ಲೆಗಳ ಜನ ಹಣ ಹೂಡಿಕೆ ಮಾಡಿರುವ ಮಾಹಿತಿ ಇದೆ. ಸುಮಾರು ₹ 2.50 ಕೋಟಿಯಷ್ಟು ವಂಚನೆಯಾಗಿರುವುದಕ್ಕೆ ಸದ್ಯ ದಾಖಲೆ ಸಿಕ್ಕಿದೆ’ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>