<p><strong>ಬೆಂಗಳೂರು: </strong>ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ನಗರದ ದೇಗಲಗಳಲ್ಲಿ ವಿಶೇಷ ಪೂಜೆ, ಅಲ್ಲಲ್ಲಿ ಗೋಪೂಜೆ, ಕಿಚ್ಚು ಹಾಯಿಸುವ ಕಾರ್ಯಕ್ರಮಗಳ ಗುರುವಾರ ನಡೆದವು. ಚಿಣ್ಣರು, ಮಹಿಳೆಯರು ಹೊಸ ಬಟ್ಟೆ ತೊಟ್ಟು ಎಳ್ಳು–ಬೆಲ್ಲ ಮತ್ತು ಕಬ್ಬು ಹಂಚಿ ಸಂಭ್ರಮಿಸಿದರು.</p>.<p>ಬನಶಂಕರಿ ದೇಗುಲ, ರಾಜರಾಜೇಶ್ವರಿ ದೇವಾಲಯ, ಕಾಡುಮಲ್ಲೇಶ್ವರ ದೇಗುಲ ಹಾಗೂ ವಿವಿಧ ಶಿವನ ದೇಗುಲಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಚಳಿ ನಡುವೆಯೂ ಬೆಳಿಗ್ಗೆಯಿಂದಲೇ ಸರದಿ ಸಾಲಿನಲ್ಲಿ ಭಕ್ತರು ದೇವಾಲಯದ ಮುಂದೆ ನಿಂತಿದ್ದರು.</p>.<p>ಮನೆ ಮನೆಗಳೂ ತಳಿರು ತೋರಣಗಳಿಂದ ಸಿಂಗಾರಗೊಂಡಿದ್ದವು. ಹಲವು ಬೀದಿಗಳಲ್ಲಿ ಮಹಿಳೆಯರು ಬುಧವಾರ ರಾತ್ರಿಯೇ ರಂಗೋಲಿ ಬಿಡಿಸಿ ಸಂಭ್ರಮಿಸಿದ್ದರು. ಬಣ್ಣದ ರಂಗೋಲಿಯಲ್ಲಿ ರಚಿಸಿದ್ದ ಸಂಕ್ರಾಂತಿ ಶುಭಾಶಯಗಳು ಮನೆಗಳ ಮುಂದೆ ರಾರಾಜಿಸಿದವು.</p>.<p>ಮಹಿಳೆಯರು ಮತ್ತು ಮಕ್ಕಳು ಮಧ್ಯಾಹ್ನದ ನಂತರ ಮನೆ ಮನೆಗೆ ಎಳ್ಳು, ಬೆಲ್ಲದ ಪೊಟ್ಟಣ ಮತ್ತು ಕಬ್ಬು ಹಂಚಿ ಖುಷಿಪಟ್ಟರು. ಕೋವಿಡ್ ಕಾರಣದಿಂದ ಕಳೆದ ವರ್ಷ ಹಲವು ಹಬ್ಬಗಳನ್ನು ಸಂಭ್ರಮದಿಂದ ಆಚರಿಸಲು ಆಗಿರಲಿಲ್ಲ.</p>.<p>ಜಯನಗರ ಶಾಸಕಿ ಸೌಮ್ಯರೆಡ್ಡಿ ಅವರು ಪೌರ ಕಾರ್ಮಿಕರೊಂದಿಗೆ ವಿಶೇಷವಾಗಿ ಸಂಕ್ರಾಂತಿ ಆಚರಿಸಿದರು. ಕಾರ್ಮಿಕರಿಗೆ ಎಳ್ಳು ಬೆಲ್ಲದ ಜತೆಗೆ ಸೀರೆ ಮತ್ತು ಪಂಚೆ ನೀಡಿ ಸತ್ಕರಿಸಿದರು.</p>.<p>ಮಹಾಲಕ್ಷ್ಮಿ ಎಜುಕೇಷನಲ್ ಟ್ರಸ್ಟ್ ಮತ್ತು ಬಿಜೆಪಿ ಯುವ ಮೋರ್ಚಾದಿಂದ ಗೋಪೂಜೆ ನೆರವೇರಿಸಲಾಯಿತು. ನಂದಿನಿ ಲೇಔಟ್ನ ಮಾರುತಿ ನಗರದಲ್ಲಿ ನಂದಿನಿ ಉತ್ಸವ ಮತ್ತು ಸಂಕ್ರಾಂತಿ ಉತ್ಸವ ಸಮಿತಿಯಿಂದ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ದನಗಳನ್ನು ಕಿಚ್ಚು ಹಾಯಿಸುವ ಮೂಲಕ ಗ್ರಾಮೀಣ ಸಂಸ್ಕೃತಿಯನ್ನು ನಿವಾಸಿಗಳಿಗೆ ನೆನಪಿಸಲಾಯಿತು.</p>.<p>ತೆಲುಗು ವಿಜ್ಞಾನ ಸಮಿತಿಯಿಂದ ವಯ್ಯಾಲಿಕಾವಲಿನಲ್ಲಿ ಸುಗ್ಗಿ ಹಬ್ಬವನ್ನು ಗ್ರಾಮೀಣ ಸೊಗಡಿನ ಮಾದರಿಯಲ್ಲಿ ಆಚರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ನಗರದ ದೇಗಲಗಳಲ್ಲಿ ವಿಶೇಷ ಪೂಜೆ, ಅಲ್ಲಲ್ಲಿ ಗೋಪೂಜೆ, ಕಿಚ್ಚು ಹಾಯಿಸುವ ಕಾರ್ಯಕ್ರಮಗಳ ಗುರುವಾರ ನಡೆದವು. ಚಿಣ್ಣರು, ಮಹಿಳೆಯರು ಹೊಸ ಬಟ್ಟೆ ತೊಟ್ಟು ಎಳ್ಳು–ಬೆಲ್ಲ ಮತ್ತು ಕಬ್ಬು ಹಂಚಿ ಸಂಭ್ರಮಿಸಿದರು.</p>.<p>ಬನಶಂಕರಿ ದೇಗುಲ, ರಾಜರಾಜೇಶ್ವರಿ ದೇವಾಲಯ, ಕಾಡುಮಲ್ಲೇಶ್ವರ ದೇಗುಲ ಹಾಗೂ ವಿವಿಧ ಶಿವನ ದೇಗುಲಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಚಳಿ ನಡುವೆಯೂ ಬೆಳಿಗ್ಗೆಯಿಂದಲೇ ಸರದಿ ಸಾಲಿನಲ್ಲಿ ಭಕ್ತರು ದೇವಾಲಯದ ಮುಂದೆ ನಿಂತಿದ್ದರು.</p>.<p>ಮನೆ ಮನೆಗಳೂ ತಳಿರು ತೋರಣಗಳಿಂದ ಸಿಂಗಾರಗೊಂಡಿದ್ದವು. ಹಲವು ಬೀದಿಗಳಲ್ಲಿ ಮಹಿಳೆಯರು ಬುಧವಾರ ರಾತ್ರಿಯೇ ರಂಗೋಲಿ ಬಿಡಿಸಿ ಸಂಭ್ರಮಿಸಿದ್ದರು. ಬಣ್ಣದ ರಂಗೋಲಿಯಲ್ಲಿ ರಚಿಸಿದ್ದ ಸಂಕ್ರಾಂತಿ ಶುಭಾಶಯಗಳು ಮನೆಗಳ ಮುಂದೆ ರಾರಾಜಿಸಿದವು.</p>.<p>ಮಹಿಳೆಯರು ಮತ್ತು ಮಕ್ಕಳು ಮಧ್ಯಾಹ್ನದ ನಂತರ ಮನೆ ಮನೆಗೆ ಎಳ್ಳು, ಬೆಲ್ಲದ ಪೊಟ್ಟಣ ಮತ್ತು ಕಬ್ಬು ಹಂಚಿ ಖುಷಿಪಟ್ಟರು. ಕೋವಿಡ್ ಕಾರಣದಿಂದ ಕಳೆದ ವರ್ಷ ಹಲವು ಹಬ್ಬಗಳನ್ನು ಸಂಭ್ರಮದಿಂದ ಆಚರಿಸಲು ಆಗಿರಲಿಲ್ಲ.</p>.<p>ಜಯನಗರ ಶಾಸಕಿ ಸೌಮ್ಯರೆಡ್ಡಿ ಅವರು ಪೌರ ಕಾರ್ಮಿಕರೊಂದಿಗೆ ವಿಶೇಷವಾಗಿ ಸಂಕ್ರಾಂತಿ ಆಚರಿಸಿದರು. ಕಾರ್ಮಿಕರಿಗೆ ಎಳ್ಳು ಬೆಲ್ಲದ ಜತೆಗೆ ಸೀರೆ ಮತ್ತು ಪಂಚೆ ನೀಡಿ ಸತ್ಕರಿಸಿದರು.</p>.<p>ಮಹಾಲಕ್ಷ್ಮಿ ಎಜುಕೇಷನಲ್ ಟ್ರಸ್ಟ್ ಮತ್ತು ಬಿಜೆಪಿ ಯುವ ಮೋರ್ಚಾದಿಂದ ಗೋಪೂಜೆ ನೆರವೇರಿಸಲಾಯಿತು. ನಂದಿನಿ ಲೇಔಟ್ನ ಮಾರುತಿ ನಗರದಲ್ಲಿ ನಂದಿನಿ ಉತ್ಸವ ಮತ್ತು ಸಂಕ್ರಾಂತಿ ಉತ್ಸವ ಸಮಿತಿಯಿಂದ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ದನಗಳನ್ನು ಕಿಚ್ಚು ಹಾಯಿಸುವ ಮೂಲಕ ಗ್ರಾಮೀಣ ಸಂಸ್ಕೃತಿಯನ್ನು ನಿವಾಸಿಗಳಿಗೆ ನೆನಪಿಸಲಾಯಿತು.</p>.<p>ತೆಲುಗು ವಿಜ್ಞಾನ ಸಮಿತಿಯಿಂದ ವಯ್ಯಾಲಿಕಾವಲಿನಲ್ಲಿ ಸುಗ್ಗಿ ಹಬ್ಬವನ್ನು ಗ್ರಾಮೀಣ ಸೊಗಡಿನ ಮಾದರಿಯಲ್ಲಿ ಆಚರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>