<p><strong>ಯಲಹಂಕ:</strong> ಅಲಂಕೃತ ಎತ್ತುಗಳು, ರಾಶಿ ಪೂಜೆ, ಚಿತ್ತಾರದ ರಂಗೋಲಿ, ಬಾನಂಗಳದಲ್ಲಿ ಹಾರಾಡಿದ ಗಾಳಿಪಟ, ಹಳ್ಳಿ ಆಟಗಳು, ಜಾನಪದ ಕಲೆಗಳ ಅನಾವರಣ, ಕರಕುಶಲ ವಸ್ತುಗಳು, ಸಿರಿಧಾನ್ಯಗಳ ಉತ್ಪನ್ನಗಳು ಮತ್ತು ತಿನಿಸುಗಳ ಮಾರಾಟ, ಅಲಂಕೃತ ಎತ್ತಿನಬಂಡಿಯಲ್ಲಿ ಸವಾರಿಮಾಡಿ ಖುಷಿಪಟ್ಟ ನಾಗರಿಕರು...</p>.<p>ಬ್ಯಾಟರಾಯನಪುರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೆಬಿಜಿ ತಂಡವು ಶಾಸಕ ಕೃಷ್ಣಬೈರೇಗೌಡ ನೇತೃತ್ವದಲ್ಲಿ ಜಕ್ಕೂರಿನ ಅರ್ಕಾವತಿ ಬಡಾವಣೆಯಲ್ಲಿ ಆಯೋಜಿಸಿದ್ದ ‘ಸುಗ್ಗಿ-ಹುಗ್ಗಿ’ ಆಚರಣೆಯ ದೃಶ್ಯಗಳಿವು.</p>.<p>ಮಕ್ಕಳು ಮತ್ತು ಪೋಷಕರು ವಿವಿಧ ಆಕೃತಿಯ ಗಾಳಿಪಟಗಳನ್ನು ಹಾರಿಸಿ ಖುಷಿಪಟ್ಟರು. ಪೊಂಗಲ್, ಕಡಲೆಕಾಯಿ, ಅವರೆಕಾಯಿ, ಕಬ್ಬಿನ ಜಲ್ಲೆ ಹಾಗೂ ಸಿರಿಧಾನ್ಯಗಳಿಂದ ತಯಾರಿಸಿದ ಖಾದ್ಯ ಸವಿದರು.</p>.<p>ಕೃಷಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ರಾಶಿಪೂಜೆ ಪ್ರದರ್ಶನ ಆಕರ್ಷಣೀಯವಾಗಿತ್ತು.</p>.<p>ಶಾಸಕ ಕೃಷ್ಣ ಬೈರೇಗೌಡ, ಸಂಕ್ರಾಂತಿ ಹಬ್ಬವು ಗ್ರಾಮೀಣ ಸೊಗಡಿನ ಸಂಸ್ಕೃತಿಯ ಸಂಕೇತ ಎಂದರು.</p>.<p>ಮುಖಂಡರಾದ ಎಂ.ಜಯಗೋಪಾಲಗೌಡ, ಎನ್.ಎನ್.ಶ್ರೀನಿವಾಸಯ್ಯ, ದಾನೇಗೌಡ, ಎನ್.ಕೆ.ಮಹೇಶ್ ಕುಮಾರ್, ಪಿ.ವಿ.ಮಂಜುನಾಥಬಾಬು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ಅಲಂಕೃತ ಎತ್ತುಗಳು, ರಾಶಿ ಪೂಜೆ, ಚಿತ್ತಾರದ ರಂಗೋಲಿ, ಬಾನಂಗಳದಲ್ಲಿ ಹಾರಾಡಿದ ಗಾಳಿಪಟ, ಹಳ್ಳಿ ಆಟಗಳು, ಜಾನಪದ ಕಲೆಗಳ ಅನಾವರಣ, ಕರಕುಶಲ ವಸ್ತುಗಳು, ಸಿರಿಧಾನ್ಯಗಳ ಉತ್ಪನ್ನಗಳು ಮತ್ತು ತಿನಿಸುಗಳ ಮಾರಾಟ, ಅಲಂಕೃತ ಎತ್ತಿನಬಂಡಿಯಲ್ಲಿ ಸವಾರಿಮಾಡಿ ಖುಷಿಪಟ್ಟ ನಾಗರಿಕರು...</p>.<p>ಬ್ಯಾಟರಾಯನಪುರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೆಬಿಜಿ ತಂಡವು ಶಾಸಕ ಕೃಷ್ಣಬೈರೇಗೌಡ ನೇತೃತ್ವದಲ್ಲಿ ಜಕ್ಕೂರಿನ ಅರ್ಕಾವತಿ ಬಡಾವಣೆಯಲ್ಲಿ ಆಯೋಜಿಸಿದ್ದ ‘ಸುಗ್ಗಿ-ಹುಗ್ಗಿ’ ಆಚರಣೆಯ ದೃಶ್ಯಗಳಿವು.</p>.<p>ಮಕ್ಕಳು ಮತ್ತು ಪೋಷಕರು ವಿವಿಧ ಆಕೃತಿಯ ಗಾಳಿಪಟಗಳನ್ನು ಹಾರಿಸಿ ಖುಷಿಪಟ್ಟರು. ಪೊಂಗಲ್, ಕಡಲೆಕಾಯಿ, ಅವರೆಕಾಯಿ, ಕಬ್ಬಿನ ಜಲ್ಲೆ ಹಾಗೂ ಸಿರಿಧಾನ್ಯಗಳಿಂದ ತಯಾರಿಸಿದ ಖಾದ್ಯ ಸವಿದರು.</p>.<p>ಕೃಷಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ರಾಶಿಪೂಜೆ ಪ್ರದರ್ಶನ ಆಕರ್ಷಣೀಯವಾಗಿತ್ತು.</p>.<p>ಶಾಸಕ ಕೃಷ್ಣ ಬೈರೇಗೌಡ, ಸಂಕ್ರಾಂತಿ ಹಬ್ಬವು ಗ್ರಾಮೀಣ ಸೊಗಡಿನ ಸಂಸ್ಕೃತಿಯ ಸಂಕೇತ ಎಂದರು.</p>.<p>ಮುಖಂಡರಾದ ಎಂ.ಜಯಗೋಪಾಲಗೌಡ, ಎನ್.ಎನ್.ಶ್ರೀನಿವಾಸಯ್ಯ, ದಾನೇಗೌಡ, ಎನ್.ಕೆ.ಮಹೇಶ್ ಕುಮಾರ್, ಪಿ.ವಿ.ಮಂಜುನಾಥಬಾಬು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>