ಕ್ಷೇತ್ರ ವಿಶೇಷ: ಗೌತಮ ಮಹರ್ಷಿ ಈ ಗುಹಾಂತರ ದೇವಾಲಯದಲ್ಲಿ ತಪಸ್ಸು ಮಾಡಿದ್ದರು ಎಂಬ ಐತಿಹ್ಯ ಇದೆ. ಹೀಗಾಗಿ ಇದಕ್ಕೆ ಗೌತಮ ಕ್ಷೇತ್ರ ಎಂಬ ಹೆಸರೂ ಇದೆ. ದೇವಾಲಯದ ಗರ್ಭಗುಡಿಯ ಸುತ್ತಲಿನ ಗುಹಾ ಮಾರ್ಗದಲ್ಲಿ ಗೌತಮ ಮಹರ್ಷಿ, ಭಾರದ್ವಾಜ ಮಹರ್ಷಿ, ಸಪ್ತ ಮಾತೃಕೆಯರಾದ ಬ್ರಾಹ್ಮೀ, ಮಾಹೇಶ್ವರಿ, ವಾರಾಹಿ, ಚಾಮುಂಡಿ, ವೈಷ್ಣವಿ, ಶ್ರೀದೇವಿ, ಭೂದೇವಿಯ ವಿಗ್ರಹಗಳು ಇವೆ. ಮಾಗಡಿ ಕೆಂಪೇಗೌಡರ ಕಾಲದಲ್ಲಿ ದೇವಸ್ಥಾನ ಜೀರ್ಣೋದ್ಧಾರವಾಯಿತು ಎಂಬ ಇತಿಹಾಸವಿದೆ.