<p><strong>ಬೆಂಗಳೂರು: </strong>‘ಜಾತಿಯನ್ನು ತೊರೆದು ಬಾಳಿರಿ ಎಂದವರನ್ನೇ ಜಾತಿಯ ಬ್ರ್ಯಾಂಡ್ ಆಗಿ ಮಾಡಲಾಗುತ್ತಿದೆ. ದಾಸರ ತತ್ವಗಳನ್ನು ಅಳವಡಿಸಿಕೊಳ್ಳುವ ಬದಲಿಗೆ ಅವರ ಹೆಸರನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲಾಗುತ್ತಿದೆ’ ಎಂದು ಗಾಯಕ ಎಸ್.ಶಂಕರ್ ಶಾನಭಾಗ ಹೇಳಿದರು.</p>.<p>ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಹಾಗೂ ಭಾರತೀಯ ವಿದ್ಯಾಭವನದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಕನಕ ಕೀರ್ತನ ಕಾರ್ಯಾಗಾರದ ಉದ್ಧಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎಸ್.ರಂಗಪ್ಪ, ‘ಕನಕದಾಸರ ತತ್ವಗಳನ್ನು ಸಾರುವ ಪ್ರಯತ್ನ ಇದು. ಐದು ದಿನಗಳ ಕಾರ್ಯಾಗಾರದಲ್ಲಿ ಸಾಧ್ಯವಾದಷ್ಟು ಕಲಿತುಕೊಂಡು, ಅದನ್ನು ಇದೇ ವೇದಿಕೆಯಲ್ಲಿ ಪ್ರದರ್ಶಿಸುವ ಮೂಲಕಅವಕಾಶಗಳನ್ನು ಸೃಷ್ಟಿಸಿಕೊಳ್ಳಿ’ ಎಂದು ಹೇಳಿದರು.</p>.<p>ಗಾಯಕಿ ಟಿ.ಎಸ್.ಸತ್ಯವತಿ, ‘ಕನಕದಾಸರ ಕೀರ್ತನೆಗಳು ಸಂಗೀತದ ಎಲ್ಲಾ ಪ್ರಕಾರಗಳಿಗೆ ಹೊಂದಿಕೊಳ್ಳು<br />ತ್ತವೆ’ ಎಂದರು.</p>.<p>ಭಾರತೀಯ ವಿದ್ಯಾಭವನದ ನಿರ್ದೇಶಕ ಎಚ್.ಎನ್.ಸುರೇಶ್, ‘ಕನಕದಾಸರ ದಾಸರ ಕೀರ್ತನೆಗಳು ಸಾರ್ವಕಾಲಿಕ. ಆ ಕೀರ್ತನೆಗಳು ಮನೆ ಮನಗಳನ್ನು ತಲುಪಲಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಜಾತಿಯನ್ನು ತೊರೆದು ಬಾಳಿರಿ ಎಂದವರನ್ನೇ ಜಾತಿಯ ಬ್ರ್ಯಾಂಡ್ ಆಗಿ ಮಾಡಲಾಗುತ್ತಿದೆ. ದಾಸರ ತತ್ವಗಳನ್ನು ಅಳವಡಿಸಿಕೊಳ್ಳುವ ಬದಲಿಗೆ ಅವರ ಹೆಸರನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲಾಗುತ್ತಿದೆ’ ಎಂದು ಗಾಯಕ ಎಸ್.ಶಂಕರ್ ಶಾನಭಾಗ ಹೇಳಿದರು.</p>.<p>ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಹಾಗೂ ಭಾರತೀಯ ವಿದ್ಯಾಭವನದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಕನಕ ಕೀರ್ತನ ಕಾರ್ಯಾಗಾರದ ಉದ್ಧಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎಸ್.ರಂಗಪ್ಪ, ‘ಕನಕದಾಸರ ತತ್ವಗಳನ್ನು ಸಾರುವ ಪ್ರಯತ್ನ ಇದು. ಐದು ದಿನಗಳ ಕಾರ್ಯಾಗಾರದಲ್ಲಿ ಸಾಧ್ಯವಾದಷ್ಟು ಕಲಿತುಕೊಂಡು, ಅದನ್ನು ಇದೇ ವೇದಿಕೆಯಲ್ಲಿ ಪ್ರದರ್ಶಿಸುವ ಮೂಲಕಅವಕಾಶಗಳನ್ನು ಸೃಷ್ಟಿಸಿಕೊಳ್ಳಿ’ ಎಂದು ಹೇಳಿದರು.</p>.<p>ಗಾಯಕಿ ಟಿ.ಎಸ್.ಸತ್ಯವತಿ, ‘ಕನಕದಾಸರ ಕೀರ್ತನೆಗಳು ಸಂಗೀತದ ಎಲ್ಲಾ ಪ್ರಕಾರಗಳಿಗೆ ಹೊಂದಿಕೊಳ್ಳು<br />ತ್ತವೆ’ ಎಂದರು.</p>.<p>ಭಾರತೀಯ ವಿದ್ಯಾಭವನದ ನಿರ್ದೇಶಕ ಎಚ್.ಎನ್.ಸುರೇಶ್, ‘ಕನಕದಾಸರ ದಾಸರ ಕೀರ್ತನೆಗಳು ಸಾರ್ವಕಾಲಿಕ. ಆ ಕೀರ್ತನೆಗಳು ಮನೆ ಮನಗಳನ್ನು ತಲುಪಲಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>