‘ಬೆಂಗಳೂರಿನಜನರನ್ನು ಗಮನದಲ್ಲಿಟ್ಟುಕೊಂಡು ಕೋರಮಂಗಲದ ಮಳಿಗೆಯನ್ನು ಕಲಾತ್ಮಕವಾಗಿ ಮರುವಿನ್ಯಾಸಗೊಳಿಸಲಾಗಿದೆ. ಇದು ಗ್ರಾಹಕರ ಮೆಚ್ಚುಗೆ ಗಳಿಸಲಿದ್ದು, ಅವರಿಗೆ ವಿಶಿಷ್ಟ ಅನುಭವ ನೀಡಲಿದೆ. ಮಳಿಗೆಗಳ ಸಂಖ್ಯೆ ಮತ್ತು ಆಭರಣ ಮಾರಾಟದಲ್ಲಿ ಜಗತ್ತಿನಲ್ಲೇ ಪ್ರಥಮ ಸ್ಥಾನ ಪಡೆಯುವ ಗುರಿ ನಮ್ಮದಾಗಿದೆ. ಮುಂದಿನ ಐದು ವರ್ಷಗಳಲ್ಲಿ ಮಳಿಗೆಗಳ ಸಂಖ್ಯೆಯನ್ನು ಮೂರುಪಟ್ಟು ಹೆಚ್ಚಿಸುವ ಯೋಜನೆ ಇದೆ’ ಎಂದು ಮಲಬಾರ್ ಸಮೂಹದ ಅಧ್ಯಕ್ಷ ಎಂ.ಪಿ. ಅಹಮ್ಮದ್ ತಿಳಿಸಿದರು.