‘ಕೋವಿಡ್ ಮೂರನೇ ಅಲೆ ಯನ್ನು ಎದುರಿಸಬೇಕಾದರೆ ದೇಶದ ಜನತೆ ಲಸಿಕೆ ಪಡೆದುಕೊಳ್ಳಬೇಕು. ರೋಗನಿರೋಧಕ ಶಕ್ತಿ ವೃದ್ಧಿಗೆ ಲಸಿಕೆ ಸಹಕಾರಿ. ಹಾಗಾಗಿ, ದುರ್ಬಲ ವರ್ಗದವರಿಗೆ ಲಸಿಕೆ ಪಡೆಯಲು ನೆರವಾಗುತ್ತಿದ್ದೇವೆ. ಸಮಾಜದ ಆರೋಗ್ಯ ಮತ್ತು ಯೋಗಕ್ಷೇಮ ಕಾಪಾಡಲು ಎಲ್ಲ ಪ್ರಯತ್ನಗಳನ್ನೂ ಮಾಡಲಾಗುತ್ತಿದೆ’ ಎಂದು ಮಲಬಾರ್ ಸಮೂಹದ ಅಧ್ಯಕ್ಷ ಎಂ.ಪಿ. ಅಹ್ಮದ್ ಅವರು ತಿಳಿಸಿದರು.