<p><strong>ಬೆಂಗಳೂರು:</strong> ‘ಮಲೇಷ್ಯಾ ಮರಳಿನ ಗುಣಮಟ್ಟವನ್ನು ಸಮಗ್ರವಾಗಿ ಪರಿಶೀಲನೆ ಮಾಡಿ ಮುಂದೆ ಆಮದು ಮಾಡಿಕೊಳ್ಳಬೇಕೇ ಬೇಡವೇ ಎಂಬ ನಿರ್ಧಾರಕ್ಕೆ ಬರಲಾಗುವುದು’ ಎಂದು ಅರಣ್ಯ ಸಚಿವ ಸಿ.ಸಿ. ಪಾಟೀಲ ಹೇಳಿದರು.</p>.<p>ಅರಣ್ಯ ಇಲಾಖೆಯ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಮಲೇಷ್ಯಾ ಮರಳಿನ ತಾಳಿಕೆ ಮತ್ತು ಬಾಳಿಕೆ ಬಗ್ಗೆ ಖಾತರಿ ಪಡೆದು ಬಳಿಕ ಮುಖ್ಯಮಂತ್ರಿ ಜತೆ ಸಮಾಲೋಚನೆ ನಡೆಸಲಾಗುವುದು’ ಎಂದರು.</p>.<p>‘ರಾಜ್ಯದಲ್ಲಿ ಸದ್ಯ ಬೇಡಿಕೆಗೆ ತಕ್ಕಷ್ಟು ಮರಳು ಪೂರೈಕೆಯಾಗುತ್ತಿದೆ. ಉತ್ತರ ಕರ್ನಾಟಕದಲ್ಲಿ ನೆರೆ ಉಂಟಾದಾಗ ನದಿ ಪಕ್ಕದ ಜಮೀನುಗಳಲ್ಲೂ ಮರಳು ಶೇಖರಣೆಯಾಗಿದೆ. ಅದನ್ನು ಭೂಮಾಲೀಕರು ಬಳಸಿಕೊಂಡು ಉಳಿಕೆ ಮರಳು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಹಿಂದಿನ ಸರ್ಕಾರದ ಅವಧಿಯಲ್ಲಿ ಎಂಎಸ್ಐಎಲ್ ಮೂಲಕ ಮರಳು ಆಮದು ಮಾಡಿಕೊಳ್ಳಲಾಗಿದೆ. ಇದರಲ್ಲಿ ಅಕ್ರಮ ನಡೆದಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು. ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಅವಕಾಶ ನೀಡಿಲ್ಲ. ಯಾವುದೇ ಒತ್ತಡಕ್ಕೂ ಮಣಿಯುವ ಪ್ರಶ್ನೆ ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.</p>.<p>‘ಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಅವಕಾಶ ಕೋರಿ ಯಾರೊಬ್ಬರೂ ಒತ್ತಡ ಹೇರಿಲ್ಲ. ಹಾಗೆಯೇ, ಆ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಗೂ ಅವಕಾಶವಿಲ್ಲ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮಲೇಷ್ಯಾ ಮರಳಿನ ಗುಣಮಟ್ಟವನ್ನು ಸಮಗ್ರವಾಗಿ ಪರಿಶೀಲನೆ ಮಾಡಿ ಮುಂದೆ ಆಮದು ಮಾಡಿಕೊಳ್ಳಬೇಕೇ ಬೇಡವೇ ಎಂಬ ನಿರ್ಧಾರಕ್ಕೆ ಬರಲಾಗುವುದು’ ಎಂದು ಅರಣ್ಯ ಸಚಿವ ಸಿ.ಸಿ. ಪಾಟೀಲ ಹೇಳಿದರು.</p>.<p>ಅರಣ್ಯ ಇಲಾಖೆಯ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಮಲೇಷ್ಯಾ ಮರಳಿನ ತಾಳಿಕೆ ಮತ್ತು ಬಾಳಿಕೆ ಬಗ್ಗೆ ಖಾತರಿ ಪಡೆದು ಬಳಿಕ ಮುಖ್ಯಮಂತ್ರಿ ಜತೆ ಸಮಾಲೋಚನೆ ನಡೆಸಲಾಗುವುದು’ ಎಂದರು.</p>.<p>‘ರಾಜ್ಯದಲ್ಲಿ ಸದ್ಯ ಬೇಡಿಕೆಗೆ ತಕ್ಕಷ್ಟು ಮರಳು ಪೂರೈಕೆಯಾಗುತ್ತಿದೆ. ಉತ್ತರ ಕರ್ನಾಟಕದಲ್ಲಿ ನೆರೆ ಉಂಟಾದಾಗ ನದಿ ಪಕ್ಕದ ಜಮೀನುಗಳಲ್ಲೂ ಮರಳು ಶೇಖರಣೆಯಾಗಿದೆ. ಅದನ್ನು ಭೂಮಾಲೀಕರು ಬಳಸಿಕೊಂಡು ಉಳಿಕೆ ಮರಳು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಹಿಂದಿನ ಸರ್ಕಾರದ ಅವಧಿಯಲ್ಲಿ ಎಂಎಸ್ಐಎಲ್ ಮೂಲಕ ಮರಳು ಆಮದು ಮಾಡಿಕೊಳ್ಳಲಾಗಿದೆ. ಇದರಲ್ಲಿ ಅಕ್ರಮ ನಡೆದಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು. ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಅವಕಾಶ ನೀಡಿಲ್ಲ. ಯಾವುದೇ ಒತ್ತಡಕ್ಕೂ ಮಣಿಯುವ ಪ್ರಶ್ನೆ ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.</p>.<p>‘ಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಅವಕಾಶ ಕೋರಿ ಯಾರೊಬ್ಬರೂ ಒತ್ತಡ ಹೇರಿಲ್ಲ. ಹಾಗೆಯೇ, ಆ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಗೂ ಅವಕಾಶವಿಲ್ಲ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>