<p><strong>ಬೆಂಗಳೂರು</strong>: ‘ಆತ್ಮಕಥೆ ಎನ್ನುವುದು ಇತಿಹಾಸ, ಪ್ರವಾಸ ಕಥನವಾದರೆ ಅಲ್ಲಿ ವ್ಯಕ್ತಿ ಮರೆಯಾಗುತ್ತಾನೆ. ಸಾಹಿತ್ಯದ ಗದ್ಯ ಕೃತಿಯಾದರೆ ಅದು ಕಲ್ಪನಾ ಲೋಕವಾಗಲಿದೆ. ಆದ್ದರಿಂದ, ಆತ್ಮಕಥೆಗಳು ನೈಜತೆಯಿಂದ ಕೊಡಿರಬೇಕು’ ಎಂದು ಕೇಂದ್ರಿಯ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಶ್ರೀನಿವಾಸ ವರಖೇಡಿ ಹೇಳಿದರು.</p>.<p>ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಅಂಕಿತ ಪುಸ್ತಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಲ್ಲೇಪುರಂ ಜಿ. ವೆಂಕಟೇಶ ಅವರ ‘ದಿಟದ ದೀವಟಿಗೆ’ ಆತ್ಮಕಥೆ ಗ್ರಂಥ ಬಿಡುಗಡೆಗೊಳಿಸಿ ಅವರು ಮಾತನಾಡಿದರು.</p>.<p>‘ಬಹಳಷ್ಟು ಜನ ಆತ್ಮಕಥೆಯ ಹೆಸರಿನಲ್ಲಿ ಸ್ವಗತವನ್ನು ಬರೆಯುತ್ತಾರೆ. ಆತ್ಮಕಥೆಯಲ್ಲಿ ಸ್ವ ಮತ್ತು ಅಹಂ ಇದ್ದರೆ ಅದು ಅಹಂಕಥನವಾಗುತ್ತದೆ. ಆತ್ಮಕಥೆ ಬರೆಯಬೇಕಾದರೆ ಮೊದಲು ಆ ವ್ಯಕ್ತಿಯೇ ಅದಕ್ಕೆ ಸಾಕ್ಷಿಯಾಗಬೇಕು. ಏಕೆಂದರೆ ತಾನು ಲೇಖಕನಾಗಿ ತನ್ನನ್ನು ತಾನು ಕಾಣದೇ ಒಬ್ಬ ಸಾಕ್ಷಿಯಾಗಿ ತನ್ನ ಜೀವನವನ್ನು ನೋಡಬೇಕಾಗುತ್ತದೆ. ಇಂತಹ ವಿಚಾರವನ್ನು ನಾನು ಮಲ್ಲೇಪುರಂ ಅವರ ಆತ್ಮಕಥೆಯಲ್ಲಿ ಕಂಡಿದ್ದೇನೆ’ ಎಂದರು.</p>.<p>ವಿಶ್ರಾಂತ ಕುಲಪತಿ ಮಲ್ಲೇಪುರಂ ಜಿ. ವೆಂಕಟೇಶ, ‘ದಿಟದ ದೀವಟಿಗೆ’ ಆತ್ಮಕಥೆಯಲ್ಲಿ ಎಲ್ಲೂ ನಾನು ಆತ್ಮಸಾಕ್ಷಿಗೆ ವಿರುದ್ಧವಾಗಿ ಬರೆದಿಲ್ಲ. ನನ್ನ ಜೀವನದಲ್ಲಿ ಮೂರ್ನಾಲ್ಕು ಮಂದಿ ಬಹಳಷ್ಟು,ನೋವು, ಸಂಕಷ್ಟಗಳನ್ನು ಕೊಟ್ಟಿದ್ದರು. ಹೀಗಾಗಿ ಈ ಜೀವನವೇ ಬೇಡ ಅನಿಸಿದ್ದೂ ಇದೆ. ಆದರೆ ಅದ್ಯಾವುದನ್ನು ಕೂಡ ಆತ್ಮಕಥೆಯಲ್ಲಿ ಬರೆದುಕೊಂಡಿಲ್ಲ. ಗುರುಬಲ ಮತ್ತು ಮಿತ್ರ ಬಲದಿಂದ ಎಲ್ಲ ಸಂಕಷ್ಟಗಳನ್ನು ಗೆದ್ದಿದ್ದೇನೆ’ ಎಂದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಎಸ್. ವೀರಯ್ಯ, ವಿದ್ವಾಂಸ ಎ.ವಿ. ಪ್ರಸನ್ನ, ಕಾದಂಬರಿಕಾರ ಕು. ವೀರಭದ್ರಪ್ಪ, ಬಿ.ಎಂ.ಶ್ರೀ ಪ್ರತಿಷ್ಠಾನದ ಅಧ್ಯಕ್ಷ ಬೈರಮಂಗಲ ರಾಮೇಗೌಡ ಮುಂತಾದವರನ್ನು ಸನ್ಮಾನಿಸಲಾಯಿತು.</p>.<p>ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೇ ಪಿ. ಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿ. ಸೋಮಶೇಖರ್, ಅಖಿಲ ಕರ್ನಾಟಕ ಕೊರಮ ಸಂಘದ ಅಧ್ಯಕ್ಷ ಜಿ. ಮಾದೇಶ ಇದ್ದರು.</p>.<p> ಪುಸ್ತಕ ಪರಿಚಯ ಪುಸ್ತಕ;ದಿಟದ ದೀವಟಿಗೆ ಲೇಖಕ;ಮಲ್ಲೇಪುರಂ ಜಿ. ವೆಂಕಟೇಶ ಪ್ರಕಾಶನ; ಅಂಕಿತ ಪುಸ್ತಕ ಪುಟ;568 ಬೆಲೆ;₹595</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಆತ್ಮಕಥೆ ಎನ್ನುವುದು ಇತಿಹಾಸ, ಪ್ರವಾಸ ಕಥನವಾದರೆ ಅಲ್ಲಿ ವ್ಯಕ್ತಿ ಮರೆಯಾಗುತ್ತಾನೆ. ಸಾಹಿತ್ಯದ ಗದ್ಯ ಕೃತಿಯಾದರೆ ಅದು ಕಲ್ಪನಾ ಲೋಕವಾಗಲಿದೆ. ಆದ್ದರಿಂದ, ಆತ್ಮಕಥೆಗಳು ನೈಜತೆಯಿಂದ ಕೊಡಿರಬೇಕು’ ಎಂದು ಕೇಂದ್ರಿಯ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಶ್ರೀನಿವಾಸ ವರಖೇಡಿ ಹೇಳಿದರು.</p>.<p>ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಅಂಕಿತ ಪುಸ್ತಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಲ್ಲೇಪುರಂ ಜಿ. ವೆಂಕಟೇಶ ಅವರ ‘ದಿಟದ ದೀವಟಿಗೆ’ ಆತ್ಮಕಥೆ ಗ್ರಂಥ ಬಿಡುಗಡೆಗೊಳಿಸಿ ಅವರು ಮಾತನಾಡಿದರು.</p>.<p>‘ಬಹಳಷ್ಟು ಜನ ಆತ್ಮಕಥೆಯ ಹೆಸರಿನಲ್ಲಿ ಸ್ವಗತವನ್ನು ಬರೆಯುತ್ತಾರೆ. ಆತ್ಮಕಥೆಯಲ್ಲಿ ಸ್ವ ಮತ್ತು ಅಹಂ ಇದ್ದರೆ ಅದು ಅಹಂಕಥನವಾಗುತ್ತದೆ. ಆತ್ಮಕಥೆ ಬರೆಯಬೇಕಾದರೆ ಮೊದಲು ಆ ವ್ಯಕ್ತಿಯೇ ಅದಕ್ಕೆ ಸಾಕ್ಷಿಯಾಗಬೇಕು. ಏಕೆಂದರೆ ತಾನು ಲೇಖಕನಾಗಿ ತನ್ನನ್ನು ತಾನು ಕಾಣದೇ ಒಬ್ಬ ಸಾಕ್ಷಿಯಾಗಿ ತನ್ನ ಜೀವನವನ್ನು ನೋಡಬೇಕಾಗುತ್ತದೆ. ಇಂತಹ ವಿಚಾರವನ್ನು ನಾನು ಮಲ್ಲೇಪುರಂ ಅವರ ಆತ್ಮಕಥೆಯಲ್ಲಿ ಕಂಡಿದ್ದೇನೆ’ ಎಂದರು.</p>.<p>ವಿಶ್ರಾಂತ ಕುಲಪತಿ ಮಲ್ಲೇಪುರಂ ಜಿ. ವೆಂಕಟೇಶ, ‘ದಿಟದ ದೀವಟಿಗೆ’ ಆತ್ಮಕಥೆಯಲ್ಲಿ ಎಲ್ಲೂ ನಾನು ಆತ್ಮಸಾಕ್ಷಿಗೆ ವಿರುದ್ಧವಾಗಿ ಬರೆದಿಲ್ಲ. ನನ್ನ ಜೀವನದಲ್ಲಿ ಮೂರ್ನಾಲ್ಕು ಮಂದಿ ಬಹಳಷ್ಟು,ನೋವು, ಸಂಕಷ್ಟಗಳನ್ನು ಕೊಟ್ಟಿದ್ದರು. ಹೀಗಾಗಿ ಈ ಜೀವನವೇ ಬೇಡ ಅನಿಸಿದ್ದೂ ಇದೆ. ಆದರೆ ಅದ್ಯಾವುದನ್ನು ಕೂಡ ಆತ್ಮಕಥೆಯಲ್ಲಿ ಬರೆದುಕೊಂಡಿಲ್ಲ. ಗುರುಬಲ ಮತ್ತು ಮಿತ್ರ ಬಲದಿಂದ ಎಲ್ಲ ಸಂಕಷ್ಟಗಳನ್ನು ಗೆದ್ದಿದ್ದೇನೆ’ ಎಂದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಎಸ್. ವೀರಯ್ಯ, ವಿದ್ವಾಂಸ ಎ.ವಿ. ಪ್ರಸನ್ನ, ಕಾದಂಬರಿಕಾರ ಕು. ವೀರಭದ್ರಪ್ಪ, ಬಿ.ಎಂ.ಶ್ರೀ ಪ್ರತಿಷ್ಠಾನದ ಅಧ್ಯಕ್ಷ ಬೈರಮಂಗಲ ರಾಮೇಗೌಡ ಮುಂತಾದವರನ್ನು ಸನ್ಮಾನಿಸಲಾಯಿತು.</p>.<p>ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೇ ಪಿ. ಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿ. ಸೋಮಶೇಖರ್, ಅಖಿಲ ಕರ್ನಾಟಕ ಕೊರಮ ಸಂಘದ ಅಧ್ಯಕ್ಷ ಜಿ. ಮಾದೇಶ ಇದ್ದರು.</p>.<p> ಪುಸ್ತಕ ಪರಿಚಯ ಪುಸ್ತಕ;ದಿಟದ ದೀವಟಿಗೆ ಲೇಖಕ;ಮಲ್ಲೇಪುರಂ ಜಿ. ವೆಂಕಟೇಶ ಪ್ರಕಾಶನ; ಅಂಕಿತ ಪುಸ್ತಕ ಪುಟ;568 ಬೆಲೆ;₹595</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>