‘ಪಾನಮತ್ತನಾಗಿದ್ದ ಹರಿನಾಥ್, ಕಾರು ಚಲಾಯಿಸಿಕೊಂಡು ಹೊರಟಿದ್ದ. ಸುಬ್ರಮಣ್ಯನಗರದ ಮುಖ್ಯರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ, ಆಟೊಗೆ ಗುದ್ದಿಸಿದ್ದ. ನಂತರ, ವಿನಯ್ ಅವರ ಬೈಕ್ಗೂ ಕಾರು ಡಿಕ್ಕಿ ಹೊಡೆದಿತ್ತು. ಅಪಘಾತದಿಂದಾಗಿ ವಿನಯ್ ಹಾಗೂ ಸ್ನೇಹಿತನಿಗೆ ತೀವ್ರ ಗಾಯವಾಗಿತ್ತು. ಇಬ್ಬರನ್ನೂ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು’ ಎಂದು ತಿಳಿಸಿದರು.