ಅಂದಾಜು ₹ 60 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ರಸ್ತೆ, ಮಳೆ ನೀರುಚರಂಡಿ ಅಭಿವೃದ್ಧಿ ಕಾಮಗಾರಿಗಳನ್ನು ಅಚ್ಚುಕಟ್ಟಾಗಿ ನಡೆಸಬೇಖು. ಪಾದಚಾರಿ ರಸ್ತೆಗಳನ್ನು ಒಪ್ಪ ಓರಣವಾಗಿ ನಿರ್ಮಿಸಬೇಕು ಎಂದು ಅವರು ಸಲಹೆ ನೀಡಿದರು.
ಕ್ಷೇತ್ರ ವ್ಯಾಪ್ತಿಯಲ್ಲಿ 69 ಕಿ.ಮೀ. ಉದ್ದದಷ್ಟು ಕೇಬಲ್ಗಳನ್ನು ನೆಲದಡಿ ಅಳವಡಿಸಲಾಗುತ್ತದೆ. ಪಾದಚಾರಿ ರಸ್ತೆ ಕಿರಿದಾಗಿರುವ ಕಡೆ 59 ಕಿ.ಮೀ. ಉದ್ದದಷ್ಟು ಟ್ವಿಸ್ಟೆಡ್ ಕೇಬಲ್ (ಎಬಿ ಕೇಬಲ್) ಅಳವಡಿಸಲಾಗುತ್ತದೆ. ಈ ವೇಳೆ ಬೆಸ್ಕಾಂ ನೆಲದ ಕೆಳಗೆ ಹಾಕಿರುವ ವಿದ್ಯುತ್ ಸಂಪರ್ಕಗಳಿಗೆ ತೊಂದರೆಯಾಗದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಉದ್ಯಾನಗಳನ್ನು ₹ 10 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ. ಕಾಮಗಾರಿ ನಡೆಸುವಾಗ ಉದ್ಯಾನದಲ್ಲಿ ನಡಿಗೆ ಪಥದ ಜೊತೆ ಯೋಗ ಮಾಡಲು ಸ್ಥಳಾವಕಾಶ ಕಲ್ಪಿಸಬೇಕು. ಜನರಿಗೆ ಆಸನ ವ್ಯವಸ್ಥೆ ಮಾಡಬೇಕು. ಗಿಡ ಮರಗಳ ರಕ್ಷಣೆಗಾಗಿ ಸುತ್ತಲೂ ಕಬ್ಬಿಣದ ಗ್ರಿಲ್ ಅಳವಡಿಸಬೇಕು. ಸ್ವಚ್ಛತೆ ಕಾಪಾಡುವುದಕ್ಕೂ ಆದ್ಯತೆ ನೀಡಬೇಕು ಎಂದು ನಿರ್ದೇಶಣ ನೀಡಿದರು.