‘ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕುಕಳಸದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಭೌತಶಾಸ್ತ್ರ ಉಪನ್ಯಾಸಕರಾಗಿ ಕೆಲಸ ಮಾಡುತ್ತಿರುವ ಎನ್.ಶಿವಾನಂದ ವಿರುದ್ಧಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಆರ್.ಸ್ನೇಹಲ್ ದೂರು ನೀಡಿದ್ದಾರೆ. ಶಿವಾನಂದ ಅವರನ್ನು ತಾನು ಮಹಾರಾಣಿ ಕಾಲೇಜಿಗೆ ವರ್ಗಾವಣೆ ಮಾಡಿರುವುದಾಗಿ ಅವರು ಸುಳ್ಳು ಆದೇಶ ಪತ್ರ ಸಿದ್ಧಪಡಿಸಿದ್ದಾರೆ. ಅದಕ್ಕೆ ನನ್ನ ಸಹಿ ನಕಲು ಮಾಡಿದ್ದಾರೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.