<p><strong>ಬೆಂಗಳೂರು</strong>: ‘ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಜಲಮಂಡಳಿ ನೀರು ಪೂರೈಕೆಯ ಹಳೆಯ ಕೊಳವೆಗಳನ್ನು ₹34 ಕೋಟಿ ವೆಚ್ಚದಲ್ಲಿ ಬದಲಾವಣೆ ಮಾಡಲಾಗುತ್ತಿದೆ’ ಎಂದು ಕ್ಷೇತ್ರದ ಶಾಸಕರೂ ಆಗಿರುವ ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.</p>.<p>ಕ್ಷೇತ್ರ ವ್ಯಾಪ್ತಿಯ ಗಾಯತ್ರಿನಗರದಲ್ಲಿ ₹94 ಲಕ್ಷ ಮೊತ್ತದಲ್ಲಿ ಪೈಪುಗಳ ಬದಲಾವಣೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ‘ಹಳೆಯ ಕೊಳವೆಗಳಿಂದ ಭಾರಿ ಪ್ರಮಾಣದ ನೀರು ಸೋರಿಕೆ ಆಯುತ್ತಿದೆ. ಇದನ್ನು ತಡೆಯುವುದರ ಜೊತೆಗೆ, ನೀರಿನ ಶುದ್ಧತೆ ಕಾಪಾಡಿಕೊಳ್ಳುವುದು ಯೋಜನೆಯ ಉದ್ದೇಶ’ ಎಂದರು.</p>.<p>‘ಕ್ಷೇತ್ರದಲ್ಲಿ ಸುಮಾರು 7 ಸಾವಿರ ಮ್ಯಾನ್ಹೋಲ್ಗಳಿವೆ. ಇವೆಲ್ಲವೂ ಹಳೆಯದಾಗಿದ್ದು, ಅವುಗಳನ್ನು ಬದಲಿಸುವ ಯೋಜನೆಯನ್ನೂ ಹಾಕಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ 4 ಸಾವಿರ ಮ್ಯಾನ್ಹೋಲ್ಗಳನ್ನು ಸರಿಪಡಿಸಿ, ಮುಂದಿನ ಹಂತದಲ್ಲಿ ಉಳಿದವುಗಳನ್ನು ದುರಸ್ತಿಗೊಳಿಸಲಾಗುವುದು’ ಎಂದರು.</p>.<p>ಜಲಮಂಡಳಿಯ ಕಾರ್ಯನಿರ್ವಾಹಕ ಎಂಜಿನಿಯರ್ ಬಿ.ಎಸ್.ದಲಾಯತ್, ಬಿಜೆಪಿ ಮುಖಂಡ ನಾಗೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಜಲಮಂಡಳಿ ನೀರು ಪೂರೈಕೆಯ ಹಳೆಯ ಕೊಳವೆಗಳನ್ನು ₹34 ಕೋಟಿ ವೆಚ್ಚದಲ್ಲಿ ಬದಲಾವಣೆ ಮಾಡಲಾಗುತ್ತಿದೆ’ ಎಂದು ಕ್ಷೇತ್ರದ ಶಾಸಕರೂ ಆಗಿರುವ ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.</p>.<p>ಕ್ಷೇತ್ರ ವ್ಯಾಪ್ತಿಯ ಗಾಯತ್ರಿನಗರದಲ್ಲಿ ₹94 ಲಕ್ಷ ಮೊತ್ತದಲ್ಲಿ ಪೈಪುಗಳ ಬದಲಾವಣೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ‘ಹಳೆಯ ಕೊಳವೆಗಳಿಂದ ಭಾರಿ ಪ್ರಮಾಣದ ನೀರು ಸೋರಿಕೆ ಆಯುತ್ತಿದೆ. ಇದನ್ನು ತಡೆಯುವುದರ ಜೊತೆಗೆ, ನೀರಿನ ಶುದ್ಧತೆ ಕಾಪಾಡಿಕೊಳ್ಳುವುದು ಯೋಜನೆಯ ಉದ್ದೇಶ’ ಎಂದರು.</p>.<p>‘ಕ್ಷೇತ್ರದಲ್ಲಿ ಸುಮಾರು 7 ಸಾವಿರ ಮ್ಯಾನ್ಹೋಲ್ಗಳಿವೆ. ಇವೆಲ್ಲವೂ ಹಳೆಯದಾಗಿದ್ದು, ಅವುಗಳನ್ನು ಬದಲಿಸುವ ಯೋಜನೆಯನ್ನೂ ಹಾಕಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ 4 ಸಾವಿರ ಮ್ಯಾನ್ಹೋಲ್ಗಳನ್ನು ಸರಿಪಡಿಸಿ, ಮುಂದಿನ ಹಂತದಲ್ಲಿ ಉಳಿದವುಗಳನ್ನು ದುರಸ್ತಿಗೊಳಿಸಲಾಗುವುದು’ ಎಂದರು.</p>.<p>ಜಲಮಂಡಳಿಯ ಕಾರ್ಯನಿರ್ವಾಹಕ ಎಂಜಿನಿಯರ್ ಬಿ.ಎಸ್.ದಲಾಯತ್, ಬಿಜೆಪಿ ಮುಖಂಡ ನಾಗೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>