‘ಸಾರ್ವಜನಿಕರು ದ್ವಿಚಕ್ರ ವಾಹನ, ಆಟೊ ರಿಕ್ಷಾ, ಕಾರು ಇತ್ಯಾದಿಗಳಲ್ಲಿ ಪರೀಕ್ಷೆ ಮಾಡಿಸಿಕೊಳ್ಳಲು ಬಂದರೆ ವೈದ್ಯಕೀಯ ಸಿಬ್ಬಂದಿ ತಾವೇ ಖುದ್ದಾಗಿ ಗಂಟಲು ದ್ರವ ಸಂಗ್ರಹಿಸಿಕೊಳ್ಳಲಿದ್ದಾರೆ. ಪರೀಕ್ಷೆಯ ಫಲಿತಾಂಶವನ್ನು ಆಯಾ ವ್ಯಕ್ತಿಗಳ ಮೊಬೈಲ್ ದೂರವಾಣಿಗೆ ರವಾನಿಸಲಾಗುವುದು. ಈ ಕೇಂದ್ರವು ಬೆಳಿಗ್ಗೆ 8ರಿಂದ ರಾತ್ರಿ 8ರವರೆಗೂ ಕಾರ್ಯನಿರ್ವಹಿಸಲಿದೆ. ಇಲ್ಲಿ ಗಂಟಲು ದ್ರವ ಸಂಗ್ರಹಕಾರರು, ಪ್ರಯೋಗಾಲಯ ತಂತ್ರಜ್ಞರು ಮತ್ತು ಡೇಟಾ ಎಂಟ್ರಿ ಆಪರೇಟರುಗಳು ಇರುತ್ತಾರೆ. ಈ ವ್ಯವಸ್ಥೆಯನ್ನು ಮಲ್ಲೇಶ್ವರ ಕ್ಷೇತ್ರದ ಉಳಿದ ಭಾಗಗಳಿಗೂ ವಿಸ್ತರಿಸಲಾಗುವುದು. ಇಲ್ಲಿ ಯಾರು ಬೇಕಾದರೂ ಪರೀಕ್ಷೆ ಮಾಡಿಸಿಕೊಳ್ಳಬಹುದು’ ಎಂದು ಹೇಳಿದರು.