ಬೆಂಗಳೂರು: ಅಪಘಾತವನ್ನುಂಟು ಮಾಡಿ ಸಾರ್ವಜನಿಕರ ಮೇಲೆಯೇ ಕಾರು ಹರಿಸಲು ಯತ್ನಿಸಿ ಚಾಲಕರೊಬ್ಬರು ಪರಾರಿಯಾಗಿದ್ದು, ಅವರ ಪತ್ತೆಗಾಗಿ ಮಲ್ಲೇಶ್ವರ ಸಂಚಾರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
‘ರಾಜಾಜಿನಗರದ ಡಾ. ರಾಜ್ಕುಮಾರ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಬೈಕ್ಗೆ ಫಾರ್ಚ್ಯೂನರ್ ಕಾರೊಂದು ಡಿಕ್ಕಿ ಹೊಡೆದಿತ್ತು. ಬೈಕ್ ಸವಾರ ಗಾಯಗೊಂಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಕಾರು ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿತ್ತು. ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರು, ಕಾರು ಚಾಲಕನನ್ನು ಪ್ರಶ್ನಿಸಿದ್ದರು. ಅದೇ ಸಂದರ್ಭದಲ್ಲೇ ಆರೋಪಿತ ಚಾಲಕ, ಕಾರು ಸಮೇತ ಪರಾರಿಯಾಗಲು ಮುಂದಾಗಿದ್ದರು. ಸಾರ್ವಜನಿಕರು ಕಾರು ತಡೆಯಲು ಹೋಗಿದ್ದರು.’